ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ₹2.69 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

MLA Belur Gopalakrishna inaugurated development works worth ₹2.69 crore in Belluru Gram Panchayat, focusing on roads, culverts, retaining walls and rural infrastructure development.

ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ₹2.69 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ | ಅಭಿವೃದ್ಧಿಯೇ ನನ್ನ ಮೂಲ ಮಂತ್ರ – ಗೋಪಾಲಕೃಷ್ಣ ಬೇಳೂರು

ರಿಪ್ಪನ್‌ಪೇಟೆ : ಇಲ್ಲಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ₹2 ಕೋಟಿ 69 ಲಕ್ಷ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗೋಪಾಲಕೃಷ್ಣ ಬೇಳೂರು, ಶಾಸಕ, ಅವರು ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು. ಮತ್ತಿಕೊಪ್ಪ, ಗುಳಗುಳಿಶಂಕ್ರ ಗ್ರಾಮಗಳ ರಸ್ತೆ ಅಭಿವೃದ್ಧಿ, ದೋಬೈಲು ಗ್ರಾಮದಲ್ಲಿ ಕಾಲುಸಂಕ ನಿರ್ಮಾಣ ಹಾಗೂ ಮಸ್ಕಾನಿಯಲ್ಲಿ ತಡೆಗೋಡೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳಿಗೆ ಅಧಿಕೃತ ಚಾಲನೆ ನೀಡಲಾಯಿತು.

ಶಂಕುಸ್ಥಾಪನೆ ಬಳಿಕ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು “ಇಲ್ಲಿನ ಜನರ ಅಗತ್ಯ ಮತ್ತು ಬೇಡಿಕೆಗಳನ್ನಾಧರಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಗ್ರಾಮಸ್ಥರು ಇನ್ನೂ ಕೆಲವು ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದು, ಅವನ್ನೂ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಪರಿಹರಿಸಲಾಗುವುದು. ಪಂಚಾಯಿತಿಯ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ” ಎಂದು ಹೇಳಿದರು.

ಜನರ ಪ್ರೀತಿ ಮತ್ತು ಕೆಲಸ ಎರಡಕ್ಕೂ ಆದ್ಯತೆ ನೀಡುವ ರಾಜಕಾರಣ ನನ್ನದು ಎಂದು ತಿಳಿಸಿದ ಅವರು, “ನಿಮ್ಮ ಆಶೀರ್ವಾದದಿಂದ ಮೂರು ಬಾರಿ ಶಾಸಕನಾಗಿದ್ದೇನೆ. ಸಮಾಜಸೇವೆಯ ರಾಜಕಾರಣದಲ್ಲಿ ಜನರನ್ನು ಪ್ರೀತಿಸುವುದನ್ನು ಬಂಗಾರಪ್ಪನವರಿಂದ ಕಲಿತಿದ್ದೇನೆ. ಅಭಿವೃದ್ಧಿಯನ್ನು ಹೇಗೆ ಮಾಡಬೇಕು ಎಂಬುದನ್ನು ಕಾಗೋಡು ತಿಮ್ಮಪ್ಪನವರಿಂದ ಕಲಿತಿದ್ದೇನೆ. ನೊಂದವರಿಗೆ ನೆರವಾಗುತ್ತಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿದ್ದೇನೆ” ಎಂದು ಹೇಳಿದರು.

“ಅಭಿವೃದ್ಧಿಯೇ ನನ್ನ ಮೂಲ ಮಂತ್ರ. ಭರವಸೆಗಳ ರಾಜಕಾರಣವಲ್ಲ, ಕೆಲಸದ ಮೂಲಕ ವಿಶ್ವಾಸ ಕಟ್ಟುವುದೇ ನನ್ನ ಉದ್ದೇಶ” ಎಂದು ಸ್ಪಷ್ಟಪಡಿಸಿದ ಗೋಪಾಲಕೃಷ್ಣ ಬೇಳೂರು, ಶಾಸಕ, ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದರು. ಪಂಚ ಗ್ಯಾರಂಟಿ ಯೋಜನೆಗಳ ಜತೆಗೆ ಕ್ಷೇತ್ರಕ್ಕೆ ನೂರಾರು ಕೋಟಿ ರೂಪಾಯಿ ಅನುದಾನ ತರಲು ಸಾಧ್ಯವಾಗಿದೆ ಎಂಬ ಹೆಮ್ಮೆಯನ್ನೂ ವ್ಯಕ್ತಪಡಿಸಿದರು.

ರಸ್ತೆ, ಕುಡಿಯುವ ನೀರು, ಚರಂಡಿ, ಸಮುದಾಯ ಭವನ, ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳ ಸುಧಾರಣೆಗೆ ಈ ಅನುದಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದ ಅವರು, “ಗ್ರಾಮೀಣ ಅಭಿವೃದ್ಧಿಯಿಲ್ಲದೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಪ್ರತಿಯೊಂದು ಹಳ್ಳಿಯೂ ಸಮಾನವಾಗಿ ಬೆಳೆಯಬೇಕು” ಎಂಬ ಧ್ಯೇಯದೊಂದಿಗೆ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಗ್ರಾಮಸ್ಥರ ದಿನನಿತ್ಯದ ಜೀವನವನ್ನು ಸುಲಭಗೊಳಿಸುವ ಜೊತೆಗೆ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಿವೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಗ್ರಾ.ಪಂ.ಅಧ್ಯಕ್ಷೆ ನಾಗರತ್ನ, ಸದಸ್ಯರಾದ ಬೆಳ್ಳೂರು ತಿಮ್ಮಪ್ಪ, ರವಿ, ಮುಖಂಡರಾದ ಚಂದ್ರಮೌಳಿ, ಯೋಗೇಶ, ಬೆಳ್ಳೂರು ರವಿ, ಈಶ್ವರಪ್ಪಗೌಡ, ಉಮಾಕರ ಇನ್ನಿತರರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…

4 hours ago

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…

4 hours ago

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…

5 hours ago

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…

5 hours ago

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

10 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

11 hours ago