Four members of a family went missing after slipping into the Bhadra Left Bank Canal near Bhadravati. Rescue operations are underway in Shivamogga.
ಹೊಳೆಹೊನ್ನೂರು: ಭದ್ರಾ ಎಡದಂಡೆ ನಾಲೆಯಲ್ಲಿ ನಡೆದ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್ನಲ್ಲಿ ನಡೆದಿದೆ.
ನಾಪತ್ತೆಯಾದವರಿಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ ತೀವ್ರ ಶೋಧ ಕಾರ್ಯ ಮುಂದುವರಿದಿದೆ.
ನಾಪತ್ತೆಯಾದವರು ನೀಲಾಬಾಯಿ, ಅವರ ಪುತ್ರ ರವಿಕುಮಾರ್, ಪುತ್ರಿ ಶ್ವೇತಾ ಹಾಗೂ ಅಳಿಯ ಪರಶುರಾಮ್ ಎಂದು ಗುರುತಿಸಲಾಗಿದೆ. ಭದ್ರಾ ಎಡದಂಡೆ ನಾಲೆಯಲ್ಲಿ ಬಟ್ಟೆ ಒಗೆಯಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ನಾಲೆಗೆ ಜಾರಿ ಬಿದ್ದ ಒಬ್ಬರನ್ನು ರಕ್ಷಿಸಲು ಮತ್ತೊಬ್ಬರು, ಅವರ ಹಿಂದೆ ಇನ್ನೊಬ್ಬರು ಇಳಿದ ಪರಿಣಾಮ ನಾಲ್ವರೂ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ.
ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೆಚ್ಚುವರಿ ರಕ್ಷಣಾಧಿಕಾರಿ ಎ.ಜಿ. ಕಾರಿಯಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಾತ್ರೆ ಹಿನ್ನೆಲೆ ಅಳಿಯ ಪರಶುರಾಮ್ ಅವರು ಮಾವನ ಮನೆಗೆ ಬಂದಿದ್ದರೆಂದು ತಿಳಿದು ಬಂದಿದೆ.
ಈ ಘಟನೆ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ನಾಪತ್ತೆಯಾದವರ ಪತ್ತೆಗೆ ಶೋಧ ಕಾರ್ಯ ನಿರಂತರವಾಗಿ ನಡೆಯುತ್ತಿದೆ.
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…
ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್ಗೆ ಕರೆ VHP and Bajrang Dal…
ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…