Frustrated villagers in Shivamogga protest BSNL network failure by putting up a banner saying “Emotional Tribute to BSNL” over poor internet and broadband service.
ಶಿವಮೊಗ್ಗ : ಭಾರತದ ಅತಿ ದೊಡ್ಡ ಹಾಗೂ ಪುರಾತನ ದೂರಸಂಪರ್ಕ ಸಂಸ್ಥೆಯಾದ ಬಿಎಸ್ಎನ್ಎಲ್ (BSNL) ನೆಟ್ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಿರಂತರ ಮೊಬೈಲ್ ನೆಟ್ವರ್ಕ್ ವ್ಯತ್ಯಯಗಳ ನಡುವೆಯೂ ಸಮಸ್ಯೆ ಬಗೆಹರಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸಾರ್ವಜನಿಕರು ತಮ್ಮ ಆಕ್ರೋಶವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಿದ್ದು, ಬಿಎಸ್ಎನ್ಎಲ್ ಪ್ರತಿಕೃತಿಯ ಮೇಲೆ ‘ಬಿಎಸ್ಎನ್ಎಲ್ಗೆ ಭಾವಪೂರ್ಣ ಶ್ರದ್ಧಾಂಜಲಿ’ ಎಂಬ ಪ್ಲೆಕ್ಸ್ ಅಳವಡಿಸಿದ್ದಾರೆ.ಹೊಂಬುಜ ಮಠಕ್ಕೆ ತೆರಳುವ ರಸ್ತೆಯಲ್ಲಿ ಈ ಪ್ಲೆಕ್ಸ್ ನ್ನು ಅಳವಡಿಸಿದ್ದಾರೆ.
ಇಲ್ಲಿ ಬಳಸಿರುವ “ನೆಟ್ವರ್ಕ್ಗೆ ಭಾವಪೂರ್ಣ ಶ್ರದ್ಧಾಂಜಲಿ” ಎಂಬ ಪದಬಳಕೆ ನಿಜವಾದ ಶ್ರದ್ಧಾಂಜಲಿ ಅಲ್ಲ; ಬದಲಾಗಿ, ಮೊಬೈಲ್ ಹಾಗೂ ಇತರೆ ಸಂವಹನ ಸೇವೆಗಳ ಸಂಪೂರ್ಣ ವೈಫಲ್ಯಕ್ಕೆ ಜನರು ವ್ಯಕ್ತಪಡಿಸುವ ವ್ಯಂಗ್ಯಮಿಶ್ರಿತ ನಿರಾಸೆಯ ಪ್ರತಿಬಿಂಬವಾಗಿದೆ. ಈ ಪದವನ್ನು ಹಿಂದೆ ಕೂಡ ಬಿಎಸ್ಎನ್ಎಲ್ ಸೇವೆಗಳ ಕುಸಿತದ ವಿರುದ್ಧ ನಡೆದ ಹಲವು ಪ್ರತಿಭಟನೆಗಳಲ್ಲಿ ಬಳಸಲಾಗಿದೆ.
ನೆಟ್ವರ್ಕ್ ಸಂಪೂರ್ಣ ಸ್ಥಗಿತಗೊಂಡಂತೆಯೇ ಇರುವ ಪರಿಸ್ಥಿತಿಯಿಂದ ದಿನನಿತ್ಯದ ಕೆಲಸಗಳು, ಆನ್ಲೈನ್ ಸೇವೆಗಳು, ವಿದ್ಯಾರ್ಥಿಗಳ ಅಧ್ಯಯನ ಹಾಗೂ ರೈತರ ಸಂಪರ್ಕ ವ್ಯವಸ್ಥೆ ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿ ಈ ಪ್ಲೆಕ್ಸ್ ಅಳವಡಿಸಿರುವ ಸಾಧ್ಯತೆಯಿದೆ.
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…
ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್ಗೆ ಕರೆ VHP and Bajrang Dal…
ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…