Karnataka CM Siddaramaiah surpasses former CM Devaraj Arasu’s record for longest tenure. Congress workers celebrate in Shivamogga by distributing country chicken biryani and sweets.
ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ: ಶಿವಮೊಗ್ಗದಲ್ಲಿ ಬಿರಿಯಾನಿ, ಸಿಹಿ ಹಂಚಿ ಕಾಂಗ್ರೆಸ್ ಸಂಭ್ರಮ
ಶಿವಮೊಗ್ಗ : ರಾಜ್ಯದಲ್ಲಿ ಅತಿ ಹೆಚ್ಚು ದಿನಗಳ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ದೇವರಾಜ್ ಅರಸು ಅವರ ದಾಖಲೆಯನ್ನು ಮೀರಿ ಸಿಎಂ ಸಿದ್ದರಾಮಯ್ಯ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಸಾಧನೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದಾದ್ಯಂತ ಉತ್ಸಾಹದಿಂದ ಸಂಭ್ರಮಾಚರಣೆ ನಡೆಸುತ್ತಿದ್ದು, ಶಿವಮೊಗ್ಗದಲ್ಲೂ ವಿಶೇಷವಾಗಿ ಆಚರಣೆ ಕಂಡುಬಂದಿದೆ.
ನಗರದ ಅಶೋಕ ವೃತ್ತ, ಮೆಗ್ಗಾನ್ ಆಸ್ಪತ್ರೆ ಸೇರಿದಂತೆ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ನಾಟಿ ಕೋಳಿ ಬಿರಿಯಾನಿ ಹಾಗೂ ಸಿಹಿ ಹಂಚುವ ಮೂಲಕ ಸಾರ್ವಜನಿಕರೊಂದಿಗೆ ಸಂತಸ ಹಂಚಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್, “ಅಂದು ದೇವರಾಜ್ ಅರಸು ಬಡವರಿಗೆ ನೆಮ್ಮದಿ ನೀಡಿದವರು. ಇಂದು ಅದೇ ಹಾದಿಯಲ್ಲಿ ಸಿದ್ದರಾಮಯ್ಯ ಜನಪರ ಆಡಳಿತ ನಡೆಸುತ್ತಿದ್ದಾರೆ. ಅವರ ನೇತೃತ್ವದ ಗ್ಯಾರಂಟಿ ಯೋಜನೆಗಳು ಈಗಾಗಲೇ ಎಲ್ಲ ಮನೆಗಳಿಗೆ ತಲುಪಿವೆ. ಈ ಯೋಜನೆಗಳ ಮಹತ್ವವನ್ನು ಕಾರ್ಯಕರ್ತರು ಪ್ರತಿ ಮನೆಗೂ ತೆರಳಿ ಜನರಿಗೆ ವಿವರಿಸುವ ಕೆಲಸ ಮಾಡಬೇಕು” ಎಂದು ಕರೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಮಾತನಾಡಿ, “ಸಿದ್ದರಾಮಯ್ಯ ಎಲ್ಲಾ ಮುಖ್ಯಮಂತ್ರಿಗಳಿಗಿಂತ ಹೆಚ್ಚಿನ ಅವಧಿ ಯಶಸ್ವಿಯಾಗಿ ಸರ್ಕಾರ ನಡೆಸಿದ ನಾಯಕ. ಈಗಾಗಲೇ 16 ಬಜೆಟ್ ಮಂಡನೆ ಮಾಡಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಕರ್ನಾಟಕದ ಜನರ ಆಶೀರ್ವಾದ ಅವರೊಂದಿಗಿದೆ. ಉಚಿತ ಅಕ್ಕಿ ವಿತರಣೆ, ಶಕ್ತಿ ಯೋಜನೆ, ಯುವನಿಧಿ, ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಸೇರಿದಂತೆ ಐದು ಗ್ಯಾರಂಟಿಗಳ ಮೂಲಕ ಬಡವರ ಬದುಕನ್ನು ಹಸನಾಗಿಸಿದ್ದಾರೆ” ಎಂದು ಪ್ರಶಂಸಿಸಿದರು.
ಸಿದ್ದರಾಮಯ್ಯ ಅವರ ಈ ಹೊಸ ದಾಖಲೆ ಕಾಂಗ್ರೆಸ್ ಪಾಳಯದಲ್ಲಿ ಹೊಸ ಚೈತನ್ಯ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸಲು ನಾಯಕರು ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.
Karnataka CM Siddaramaiah surpasses former CM Devaraj Arasu’s record for longest tenure. Congress workers celebrate in Shivamogga by distributing country chicken biryani and sweets.
CM Siddaramaiah, Karnataka Chief Minister Record, Longest Serving CM Karnataka, Congress Celebration Shivamogga, Guarantee Schemes Karnataka, Devaraj Arasu Record, Shivamogga News
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…