ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ: ಶಿವಮೊಗ್ಗದಲ್ಲಿ ಬಿರಿಯಾನಿ, ಸಿಹಿ ಹಂಚಿ ಕಾಂಗ್ರೆಸ್ ಸಂಭ್ರಮ

Karnataka CM Siddaramaiah surpasses former CM Devaraj Arasu’s record for longest tenure. Congress workers celebrate in Shivamogga by distributing country chicken biryani and sweets.

ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ: ಶಿವಮೊಗ್ಗದಲ್ಲಿ ಬಿರಿಯಾನಿ, ಸಿಹಿ ಹಂಚಿ ಕಾಂಗ್ರೆಸ್ ಸಂಭ್ರಮ

ಶಿವಮೊಗ್ಗ : ರಾಜ್ಯದಲ್ಲಿ ಅತಿ ಹೆಚ್ಚು ದಿನಗಳ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ದೇವರಾಜ್ ಅರಸು ಅವರ ದಾಖಲೆಯನ್ನು ಮೀರಿ ಸಿಎಂ ಸಿದ್ದರಾಮಯ್ಯ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಸಾಧನೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದಾದ್ಯಂತ ಉತ್ಸಾಹದಿಂದ ಸಂಭ್ರಮಾಚರಣೆ ನಡೆಸುತ್ತಿದ್ದು, ಶಿವಮೊಗ್ಗದಲ್ಲೂ ವಿಶೇಷವಾಗಿ ಆಚರಣೆ ಕಂಡುಬಂದಿದೆ.

ನಗರದ ಅಶೋಕ ವೃತ್ತ, ಮೆಗ್ಗಾನ್ ಆಸ್ಪತ್ರೆ ಸೇರಿದಂತೆ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ನಾಟಿ ಕೋಳಿ ಬಿರಿಯಾನಿ ಹಾಗೂ ಸಿಹಿ ಹಂಚುವ ಮೂಲಕ ಸಾರ್ವಜನಿಕರೊಂದಿಗೆ ಸಂತಸ ಹಂಚಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್, “ಅಂದು ದೇವರಾಜ್ ಅರಸು ಬಡವರಿಗೆ ನೆಮ್ಮದಿ ನೀಡಿದವರು. ಇಂದು ಅದೇ ಹಾದಿಯಲ್ಲಿ ಸಿದ್ದರಾಮಯ್ಯ ಜನಪರ ಆಡಳಿತ ನಡೆಸುತ್ತಿದ್ದಾರೆ. ಅವರ ನೇತೃತ್ವದ ಗ್ಯಾರಂಟಿ ಯೋಜನೆಗಳು ಈಗಾಗಲೇ ಎಲ್ಲ ಮನೆಗಳಿಗೆ ತಲುಪಿವೆ. ಈ ಯೋಜನೆಗಳ ಮಹತ್ವವನ್ನು ಕಾರ್ಯಕರ್ತರು ಪ್ರತಿ ಮನೆಗೂ ತೆರಳಿ ಜನರಿಗೆ ವಿವರಿಸುವ ಕೆಲಸ ಮಾಡಬೇಕು” ಎಂದು ಕರೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಮಾತನಾಡಿ, “ಸಿದ್ದರಾಮಯ್ಯ ಎಲ್ಲಾ ಮುಖ್ಯಮಂತ್ರಿಗಳಿಗಿಂತ ಹೆಚ್ಚಿನ ಅವಧಿ ಯಶಸ್ವಿಯಾಗಿ ಸರ್ಕಾರ ನಡೆಸಿದ ನಾಯಕ. ಈಗಾಗಲೇ 16 ಬಜೆಟ್ ಮಂಡನೆ ಮಾಡಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಕರ್ನಾಟಕದ ಜನರ ಆಶೀರ್ವಾದ ಅವರೊಂದಿಗಿದೆ. ಉಚಿತ ಅಕ್ಕಿ ವಿತರಣೆ, ಶಕ್ತಿ ಯೋಜನೆ, ಯುವನಿಧಿ, ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಸೇರಿದಂತೆ ಐದು ಗ್ಯಾರಂಟಿಗಳ ಮೂಲಕ ಬಡವರ ಬದುಕನ್ನು ಹಸನಾಗಿಸಿದ್ದಾರೆ” ಎಂದು ಪ್ರಶಂಸಿಸಿದರು.

ಸಿದ್ದರಾಮಯ್ಯ ಅವರ ಈ ಹೊಸ ದಾಖಲೆ ಕಾಂಗ್ರೆಸ್ ಪಾಳಯದಲ್ಲಿ ಹೊಸ ಚೈತನ್ಯ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸಲು ನಾಯಕರು ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.

Karnataka CM Siddaramaiah surpasses former CM Devaraj Arasu’s record for longest tenure. Congress workers celebrate in Shivamogga by distributing country chicken biryani and sweets.

CM Siddaramaiah, Karnataka Chief Minister Record, Longest Serving CM Karnataka, Congress Celebration Shivamogga, Guarantee Schemes Karnataka, Devaraj Arasu Record, Shivamogga News

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

2 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

15 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

17 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

20 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

20 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

20 hours ago