A man died after a scooty collided with a buffalo near Avuka Circle in Garthikere, Ripponpet. The victim succumbed to injuries during treatment in Shivamogga.
ರಿಪ್ಪನ್ಪೇಟೆ: ಗರ್ತಿಕೆರೆ ಪಟ್ಟಣದ ಅವುಕ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟಿ ಸವಾರ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.
ಕೋಣಂದೂರು ಸಮೀಪದ ಹಾದಿಗಲ್ಲು ಗ್ರಾಮದ ಭಾಸ್ಕರ್ ಶೆಟ್ಟಿ ಮೃತ ದುರ್ಧೈವಿಯಾಗಿದ್ದಾರೆ.
ಕಳೆದ ಮಂಗಳವಾರ ರಾತ್ರಿ ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ವೇಳೆ ಅಚಾನಕ್ ರಸ್ತೆ ದಾಟುತ್ತಿದ್ದ ಎಮ್ಮೆಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿತ್ತು, ಈ ವೇಳೆ ಭಾಸ್ಕರ್ ಶೆಟ್ಟಿ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು.
ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳೀಯರು ಆಂಬುಲೆನ್ಸ್ಗೆ ಕರೆ ಮಾಡಿದರೂ, ಅದು ತಡವಾಗಿ ಬಂದ ಹಿನ್ನೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಚಿನ್ ಗೌಡ ಹಾಗೂ ಅವರ ಸ್ನೇಹಿತರು ಗಾಯಾಳುವನ್ನು ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ನಂತರ ಮಾರ್ಗಮಧ್ಯೆ ಆಂಬುಲೆನ್ಸ್ಗೆ ಶಿಫ್ಟ್ ಮಾಡಲಾಗಿತ್ತು.
ಗಾಯಾಳುವಿಗೆ ಮೊದಲಿಗೆ ರಿಪ್ಪನ್ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ಖಾಸಗಿ ಆಸ್ಪತ್ರೆಯಲ್ಲಿ ಭಾಸ್ಕರ್ ಶೆಟ್ಟಿ ಮೃತಪಟ್ಟಿದ್ದಾರೆ.
ಈ ಘಟನೆ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…
ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್ಗೆ ಕರೆ VHP and Bajrang Dal…
ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…