ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಎಚ್ಚರಿಕೆ: ಹರತಾಳು ಹಾಲಪ್ಪ

Former minister Haratallu Halappa issues a legal notice to Sagar MLA Belluru Gopalakrishna over alleged false statements on Siganduru Temple, warning of a ₹5 crore defamation lawsuit.

ಬೆಂಗಳೂರು: ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ನೋಟಿಸ್ ನೀಡಿರುವುದಾಗಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ತಿಳಿಸಿದ್ದಾರೆ. ಸಮರ್ಪಕ ಉತ್ತರ ನೀಡದಿದ್ದಲ್ಲಿ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅವರು ಎಚ್ಚರಿಸಿದರು.

ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣ ಅವರು ಪದೇಪದೇ ಸಿಗಂದೂರು ದೇವಸ್ಥಾನದ ವಿಚಾರವನ್ನು ಉಲ್ಲೇಖಿಸಿ, ತಾನು ಶಾಸಕರಾಗಿದ್ದಾಗ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿಸಲು ಪ್ರಯತ್ನಿಸಿದ್ದೆನೆಂದು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. “ನಾನು ಯಾವತ್ತೂ ಸಿಗಂದೂರು ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವುದಾಗಲಿ, ಸರ್ಕಾರದ ವಶಕ್ಕೆ ಪಡೆಯುವುದಾಗಲಿ ಯೋಚನೆಯಲ್ಲೂ ಮಾಡಿಲ್ಲ. ಆ ರೀತಿಯ ಯಾವುದೇ ಪ್ರಯತ್ನ ನಡೆದಿಲ್ಲ” ಎಂದು ಸ್ಪಷ್ಟಪಡಿಸಿದರು.ತಮ್ಮ ಕುಟುಂಬ ಪೀಳಿಗೆಗಳಿಂದಲೂ ಸಿಗಂದೂರು ದೇವಸ್ಥಾನದ ಭಕ್ತರಾಗಿದ್ದು, ತಾವೂ ಭಕ್ತರಾಗಿದ್ದಾಗಿ ಹೇಳಿದ ಅವರು, ಸಮಯ ಬಂದಾಗಲೆಲ್ಲ ದೇವಸ್ಥಾನದ ಪರವಾಗಿ ನಿಂತಿದ್ದೇನೆ ಎಂದರು.

“ನನ್ನ ನಿಲುವು ದೇವಸ್ಥಾನದ ಆಡಳಿತ ಮಂಡಳಿ ಪರವಾಗಿಯೂ ಅಲ್ಲ, ಭಟ್ಟರ ಪರವಾಗಿಯೂ ಅಲ್ಲ. ಎಲ್ಲರ ಪರವಾಗಿ ದೇವಸ್ಥಾನ ಉಳಿಯಬೇಕು, ಬೆಳೆಯಬೇಕು ಎಂಬ ಉದ್ದೇಶ ಮಾತ್ರ ನನ್ನದು. ಸರ್ಕಾರ ಅಥವಾ ಮುಜರಾಯಿ ವಹಿಸಿಕೊಳ್ಳಬೇಕೆಂದು ನಾನು ಎಂದಿಗೂ ಹೇಳಿಲ್ಲ” ಎಂದು ಹೇಳಿದರು.

ತಾನು ಈ ಆರೋಪಗಳನ್ನು ಖಂಡಿಸಿದರೂ ಕೂಡ, ಗೋಪಾಲಕೃಷ್ಣ ಅವರು ವಿವಿಧ ಪತ್ರಿಕೆಗಳನ್ನು ಉಲ್ಲೇಖಿಸಿ ಮತ್ತೆ ಮತ್ತೆ ಇದೇ ವಿಷಯ ಹೇಳುತ್ತಿದ್ದಾರೆ ಎಂದು ಹರತಾಳು ಹಾಲಪ್ಪ ಆರೋಪಿಸಿದರು. ಇದರಿಂದ ದೇವಸ್ಥಾನದ ಭಕ್ತರು, ಅರ್ಚಕರು, ಆಡಳಿತ ಮಂಡಳಿ ಹಾಗೂ ಧರ್ಮದರ್ಶಿಗಳಲ್ಲಿ ತಮ್ಮ ಬಗ್ಗೆ ತಪ್ಪು ಭಾವನೆ ಮೂಡಿಸಿ, ತಮ್ಮ ಮಾನಹಾನಿ ಮಾಡುವ ಉದ್ದೇಶ ಸ್ಪಷ್ಟವಾಗಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಕಾನೂನು ಕ್ರಮವಾಗಿ ನೋಟಿಸ್ ನೀಡಿರುವುದಾಗಿ ತಿಳಿಸಿದ ಅವರು, “5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದು ಅಥವಾ ಷರತ್ತು ರಹಿತವಾಗಿ ಕ್ಷಮೆ ಕೇಳುವುದು, ಇಲ್ಲವೇ ಆರೋಪಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರ ಒದಗಿಸುವಂತೆ ನೋಟಿಸ್‌ನಲ್ಲಿ ಸೂಚಿಸಿದ್ದೇನೆ” ಎಂದು ಹೇಳಿದರು.

ರಾಜಕೀಯ ಹಾಗೂ ಅಭಿವೃದ್ಧಿ ವಿಷಯಗಳಲ್ಲಿ ಸುಳ್ಳು ಹೇಳುವವರಿದ್ದಾರೆ. ಆದರೆ ದೇವರ ವಿಚಾರದಲ್ಲಿ ಸುಳ್ಳು ಹೇಳುವುದು ಅಕ್ಷಮ್ಯ. ಅದಕ್ಕಾಗಿಯೇ ಕಾನೂನು ಕ್ರಮಕ್ಕೆ ಮುಂದಾಗಿದ್ದೇನೆ ಎಂದು ಹರತಾಳು ಹಾಲಪ್ಪ ಹೇಳಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

18 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

19 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

23 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago