HOSANAGARA| ಮಾಜಿ ಶಾಸಕ ಬಿ.ಸ್ವಾಮಿರಾವ್ ಆಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

HOSANAGARA| ಮಾಜಿ ಶಾಸಕ ಬಿ.ಸ್ವಾಮಿರಾವ್ ಆಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

HOSANAGARA| Former MLA B. Swami Rao’s hunger strike ends

ಹೊಸನಗರ | ಪಟ್ಟಣದ ತಾಲೂಕು ಆರ್ಯ ಈಡಿಗ ವಿದ್ಯಾವರ್ಧಕ ಸಂಘದಲ್ಲಿ ಭಾರಿ ಅವ್ಯವಹಾರ ಹಾಗೂ ನಿಯಮಬಾಹಿರ ಆಡಳಿತ ನಡೆಯುತ್ತಿದೆ ಎಂದು ಆರೋಪಿಸಿ, ಮಾಜಿ ಶಾಸಕ ಬಿ.ಸ್ವಾಮಿರಾವ್ ಅವರು ಪಟ್ಟಣದ ಬಸ್ ನಿಲ್ದಾಣದ ಸಮೀಪದ ಆರ್ಯ ಈಡಿಗ ಸಂಘದ ಎದುರು ಆರಂಭಿಸಿದ್ದ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು, ಹಲವು ಮುಖಂಡರು ಹಾಗೂ ಸಮಾಜದ ಗಣ್ಯರ ಒತ್ತಾಯದ ಮೇರೆಗೆ ಕೊನೆಗೂ ಅಂತ್ಯಗೊಳಿಸಿದರು.

ಗುರುವಾರ ನಿಟ್ಟೂರು ಶ್ರೀಗಳು, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಶಾಸಕ ಆರಗ ಜ್ಞಾನೇಂದ್ರ, ಮಾಜಿ ಶಾಸಕ ಹರತಾಳು ಹಾಲಪ್ಪ,  ಸೇರಿದಂತೆ ಅನೇಕ ಸಮಾಜದ ನಾಯಕರು ಸ್ಥಳಕ್ಕೆ ಭೇಟಿ ನೀಡಿ ಸ್ವಾಮಿರಾವ್ ಅವರನ್ನು ಮನವೊಲಿಸಿದರು. ಸಂಘದಲ್ಲಿನ ಭ್ರಷ್ಟಾಚಾರದ ಬಗ್ಗೆ ಸೂಕ್ತ ತನಿಖೆ ನಡೆಸುವ ಭರವಸೆ ನೀಡಿದ ಹಿನ್ನಲೆಯಲ್ಲಿ, ಸ್ವಾಮಿರಾವ್ ಅವರು ಎಳನೀರು ಕುಡಿಯುವ ಮೂಲಕ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದರು.

ತಾವು ಶಾಸಕರಾಗಿದ್ದ ಅವಧಿಯಲ್ಲಿ ಸಂಘಕ್ಕೆ ಸೇರಿದ ಜಾಗವನ್ನು ಕಾನೂನುಬದ್ಧವಾಗಿ ಪಡೆದು, ಅಲ್ಲಿ ಮಳಿಗೆಗಳನ್ನು ನಿರ್ಮಿಸಿ ಸಂಘಕ್ಕೆ ನಿರಂತರ ಆದಾಯ ಬರುವಂತೆ ವ್ಯವಸ್ಥೆ ಮಾಡಿದ್ದೇನೆ ಎಂದು ಸ್ವಾಮಿರಾವ್ ತಿಳಿಸಿದರು. ಆದರೆ ತಮ್ಮ ನಂತರ ಅಧಿಕಾರ ಹಿಡಿದ ಈಡಿಗ ಮುಖಂಡರು ಕಳೆದ 10–15 ವರ್ಷಗಳಿಂದ ಸಂಘದ ಏಳಿಗೆಗೆ ಯಾವುದೇ ಕ್ರಮ ಕೈಗೊಳ್ಳದೇ, ಸಾಮಾನ್ಯ ಸಭೆ (ಜನರಲ್ ಬಾಡಿ) ಕೂಡ ನಡೆಸದೇ ಅವ್ಯವಹಾರ ನಡೆಸಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದರು.

ಈ ಹಿಂದೆ ಈಡಿಗ ಸಂಘದ ಕಟ್ಟಡ ಉದ್ಘಾಟನೆ ದಿನವೇ ಪ್ರತಿಭಟನೆ ನಡೆಸುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದ ಸ್ವಾಮಿರಾವ್, ಸ್ವಜಾತಿ ಮುಖಂಡರ ಮನವಿಯನ್ನು ಗೌರವಿಸಿ ಆ ಪ್ರತಿಭಟನೆಯನ್ನು ಮುಂದೂಡಿದ್ದರು. ಆದರೆ ಆಡಳಿತ ಮಂಡಳಿಯ ಧೋರಣೆ ಬದಲಾಗದ ಕಾರಣ, ಇಂದು ಹಠಾತ್ತನೆ ಸಂಘದ ಎದುರು ಧರಣಿ ಸತ್ಯಾಗ್ರಹ ಆರಂಭಿಸಿದ್ದರು. ತಮ್ಮ ಬೇಡಿಕೆಗಳು ಈಡೇರದಿದ್ದರೆ ಆಮರಣಾಂತ ಉಪವಾಸ ಸತ್ಯಾಗ್ರಹದಿಂದ ಹಿಂದೆ ಸರಿಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.

ಪ್ರಸ್ತುತ ಆಡಳಿತ ಮಂಡಳಿ ಕಾನೂನುಬಾಹಿರವಾಗಿ ಅಧಿಕಾರ ನಡೆಸುತ್ತಿದ್ದು, ತಕ್ಷಣವೇ ಎಲ್ಲಾ ಸದಸ್ಯರು ರಾಜೀನಾಮೆ ನೀಡಬೇಕು ಹಾಗೂ ಸಂಘಕ್ಕೆ ನೂತನ ಆಡಳಿತ ಮಂಡಳಿ ರಚನೆಯಾಗಬೇಕು ಎಂಬುದು ತಮ್ಮ ಪ್ರಮುಖ ಬೇಡಿಕೆ ಎಂದು ಸ್ವಾಮಿರಾವ್ ಆಗ್ರಹಿಸಿದ್ದರು.

ಮಾಜಿ ಶಾಸಕ ಜಿ.ಡಿ. ನಾರಾಯಣಪ್ಪ, ಮಾಜಿ ಸಚಿವ ಹರತಾಳು ಹಾಲಪ್ಪ, ಡಾ. ರಾಜನಂದಿನಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಮುಖಂಡರಾದ ಕಲ್ಲೂರು ಮೇಘರಾಜ್, ಆರ್.ಎ. ಚಾಬುಸಾಬ್ , ಎನ್. ಸತೀಶ್,ಸೇರಿದಂತೆ ಹಲವರು ಸ್ಥಳಕ್ಕೆ ಭೇಟಿ ನೀಡಿ ಸ್ವಾಮಿರಾವ್ ಅವರೊಂದಿಗೆ ನಿರಂತರ ಮಾತುಕತೆ ನಡೆಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

1 hour ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

6 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

8 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

20 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

20 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

22 hours ago