ಜ.22 ರಿಂದ ಹೊಸನಗರ ತಾಲೂಕಿನಾದ್ಯಂತ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮ

Hindu Sangama programs will be organized at the panchayat level in Hosanagara Taluk from January 22 to February 8, aiming to promote cultural awareness, social harmony, and self-reliant Hindu society.

ರಿಪ್ಪನ್‌ಪೇಟೆ: ಹಿಂದೂ ಸಮಾಜದ ಸಂಘಟನೆ, ಸ್ವಾವಲಂಬನೆ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತ ಸಮಾಜ ನಿರ್ಮಾಣದ ಉದ್ದೇಶದೊಂದಿಗೆ ಹೊಸನಗರ ತಾಲೂಕಿನಲ್ಲಿ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿಯ ಅಧ್ಯಕ್ಷ ವಿನಯ್ ಶೆಟ್ಟಿ ತಿಳಿಸಿದರು.

ಪಟ್ಟಣದ ಆರ್‌.ಎಸ್‌.ಎಸ್‌. ಕಾರ್ಯಾಲಯ ‘ಪಾಂಚಜನ್ಯ’ದಲ್ಲಿ ಆಯೋಜನಾ ಸಮಿತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನೂರು ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಹಿಂದೂ ಸಮಾಜವೇ ಒಟ್ಟಾಗಿ ಈ ಕಾರ್ಯಕ್ರಮಗಳನ್ನು ಸಂಘಟಿಸುತ್ತಿದೆ ಎಂದರು.

ಹೊಸನಗರ ತಾಲೂಕು ಹಿಂದೂ ಸಂಗಮ ಆಯೋಜನಾ ಸಮಿತಿಯು ತಾಲೂಕಿನ 30 ಪಂಚಾಯಿತಿಗಳನ್ನು ಪ್ರತಿನಿಧಿಸುವಂತೆ ಆಯ್ದ 17 ಸ್ಥಳಗಳಲ್ಲಿ ಜನವರಿ 22ರಿಂದ ಫೆಬ್ರವರಿ 8ರವರೆಗೆ ವಿವಿಧ ದಿನಗಳಲ್ಲಿ ಹಿಂದೂ ಸಂಗಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಮಾಹಿತಿ ನೀಡಿದರು.

ನಮ್ಮ ದೇವಾಲಯಗಳು ಕೇವಲ ಪೂಜಾ ಕೇಂದ್ರಗಳಾಗಿರದೆ, ಆಧ್ಯಾತ್ಮಿಕ ಜಾಗೃತಿ ಮೂಡಿಸುವುದರ ಜೊತೆಗೆ ಧರ್ಮ, ಸಂಸ್ಕೃತಿ ಹಾಗೂ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಶಕ್ತಿಕೇಂದ್ರಗಳಾಗಬೇಕು. ವ್ಯಕ್ತಿಯು ತನ್ನ, ಕುಟುಂಬದ ಹಾಗೂ ಸಮಾಜದ ನಡವಳಿಕೆಯಲ್ಲಿ ಸಕಾರಾತ್ಮಕ ಪರಿವರ್ತನೆ ತರಲು ಜವಾಬ್ದಾರಿಯುತ ಪಾತ್ರವಹಿಸಬೇಕೆಂದು ವಿನಯ್ ಶೆಟ್ಟಿ ಹೇಳಿದರು.

ಕುಟುಂಬದಲ್ಲಿ ಸಂಸ್ಕೃತಿ–ಸಂಸ್ಕಾರಗಳ ಸಂವರ್ಧನೆ, ಪರಿಸರದ ಬಗ್ಗೆ ಕಾಳಜಿ, ಸ್ವದೇಶಿ ವಸ್ತುಗಳ ಬಳಕೆ, ಜೀವನ ಪದ್ಧತಿಯ ವಿಕಾಸ, ಸಮಾಜದ ಎಲ್ಲರೊಂದಿಗೆ ಸಾಮರಸ್ಯ ಹಾಗೂ ನಾಗರಿಕ ಕರ್ತವ್ಯಗಳ ನಿತ್ಯ ಪಾಲನೆ—ಈ ಪಂಚ ಪರಿವರ್ತನೆಯ ಅಂಶಗಳು ಸಮಾಜದಲ್ಲಿ ಅರಳಬೇಕೆಂಬುದು ಹಿಂದೂ ಸಂಗಮದ ಪ್ರಮುಖ ಉದ್ದೇಶವಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ಮೂಗುಡ್ತಿ, ಪಂಚಾಯಿತಿ ಮಟ್ಟದಲ್ಲಿ ಸಂಘಟನೆಯ ಮೂಲಕ ಹಿಂದೂ ಧರ್ಮ–ಸಂಸ್ಕೃತಿಗಳ ಸಂರಕ್ಷಣೆ, ಸ್ವಾವಲಂಬನೆ ಹಾಗೂ ಸಮಗ್ರ ವಿಕಾಸಕ್ಕಾಗಿ ಜಾಗೃತ ಹಿಂದೂ ಸಮಾಜ ಕಟ್ಟುವ ಆಶಯದೊಂದಿಗೆ ಈ ಉತ್ಸವಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಎಲ್ಲಾ ಹಿಂದೂ ಬಾಂಧವರು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ಸಮಾಜ ಜಾಗೃತಿಯ ಈ ಕಾರ್ಯದಲ್ಲಿ ತಮ್ಮ ಪಾತ್ರ ನಿರ್ವಹಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಚಿದಂಬರರಾವ್ ಕೋಡೂರು, ಧನ್ಯಶ್ರೀ ರಮೇಶ್, ಎನ್‌.ಆರ್‌. ದೇವಾನಂದ, ಧರ್ಮೇಂದ್ರ ಕೊಳವಂಕ, ನಿವೃತ್ತ ಮಹಿಳಾ ಸೈನಿಕರಾದ ಪದ್ಮ, ಪೂರ್ಣಿಮಾ ಕಿಣಿ, ಅನಂತಮೂರ್ತಿ, ಸೋಮಶೇಖರ್, ಕೋಟೇಶ್ ಯಡೂರು, ವಸಂತ್ ಬೆಳ್ಳೂರು, ಕುಶಾಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

9 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

9 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

12 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

12 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

15 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

15 hours ago