Youth leader Nitin leads BJP workers and local residents in Hosangara to demand the construction of a new bus station. The existing old structure is unsafe and requires immediate government action.
ಹೊಸನಗರ : ತಾಲ್ಲೂಕಿನ ನಗರ ಹೋಬಳಿಯ ದುಸ್ಥಿತಿಯಲ್ಲಿರುವ ಹಳೆಯ ಬಸ್ ನಿಲ್ದಾಣ ತೆರವುಗೊಳಿಸಿ ನೂತನ ಬಸ್ ನಿಲ್ದಾಣ ನಿರ್ಮಿಸಲು ಆಗ್ರಹಿಸಿ ಯುವ ಮುಖಂಡ ನಗರ ನಿತಿನ್ ನೇತ್ರತ್ವದಲ್ಲಿ ಸಾರ್ವಜನಿಕರು ಹಾಗೂ ಬಿಜೆಪಿ ನಗರ ಹೋಬಳಿ ಕಾರ್ಯಕರ್ತರು ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ.
ಈ ಬಗ್ಗೆ ಮಾದ್ಯಮದವರೊಂದಿಗೆ ಮಾತನಾಡಿದ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಗರದ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದರೂ, ಸ್ಥಳೀಯ ಗ್ರಾಮ ಪಂಚಾಯತ್ನ ಕೆಲ ಸದಸ್ಯರು ವೈಯಕ್ತಿಕ ಹಿತಾಸಕ್ತಿಯಿಂದ ಅನಧಿಕೃತವಾಗಿ ಎನ್ಒಸಿ ನೀಡದೆ ಯೋಜನೆಯನ್ನು ವಿಳಂಬಗೊಳಿಸಿದ್ದಾರೆ ಎಂದು ಆರೋಪಿಸಿದರು.
ಪ್ರಸ್ತುತ ಇರುವ ಹಳೆಯ ಬಸ್ ನಿಲ್ದಾಣ ಸಾರ್ವಜನಿಕ ಬಳಕೆಗೆ ಅಪಾಯಕರವಾಗಿದೆ ಎಂದು ಒತ್ತಾಯಿಸಿದ್ದಾರೆ. ಅದು ಕುಸಿದು ಬಿದ್ದರೆ ಜನಸಾಮಾನ್ಯರ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ, ಸರ್ಕಾರ ತಕ್ಷಣವೇ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅಗತ್ಯವಿದೆ ಎಂದು ಹೇಳಿದ್ದಾರೆ.
ಈ ಪ್ರತಿಭಟನೆಯಲ್ಲಿ ರಾಜೇಶ್ ಹಿರಿಮನೆ, ರಮಾಕಾಂತ್ ಮತ್ತಿಮನೆ, ಶ್ರೀಕಾಂತ್, ಜಗದೀಶ್ ಹೆಂಡೆಗದ್ದೆ, ಕೆ.ಬಿ. ಕುಮಾ, ಕೃಷ್ಣಮೂರ್ತಿ, ಉಮೇಶ್, ಸಂತೋಷ ಚಿಕ್ಕಪೇಟೆ, ರಮೇಶ್, ದೇವರಾಜ್, ವಿನಾಯಕ ಚಕ್ಕಾರು ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…
ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್ಗೆ ಕರೆ VHP and Bajrang Dal…
ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…