{"ServiceProvider":"meizhuo","Time":"2026-01-15 16:18:05.410","ContentID":"a4d9d49e7d8a4a89b533fc9e8dfb32f2"}
ಸಾಗುವಾನಿ ಮರಗಳ ಅಕ್ರಮ ಕಡಿತಲೆ: ಮೂವರ ವಿರುದ್ಧ ಪ್ರಕರಣ
ಆಯನೂರು : ಇಲ್ಲಿನ ಚೋರಡಿ ಉಪ ವಲಯ ಅರಣ್ಯ ಪ್ರದೇಶದ ಕೋಟೆಹಾಳ ಗ್ರಾಮ ಸಮೀಪ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ಮೂವರು ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿದೆ.
ಚೋರಡಿ ಉಪ ವಲಯ ಅರಣ್ಯಾಧಿಕಾರಿ ಕಾಮನಾಯ್ಕ್ ಅವರ ನೇತೃತ್ವದ ಅರಣ್ಯಾಧಿಕಾರಿಗಳ ತಂಡ ಕಾಡಿನಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಕಡಿತಲೆ ಮಾಡಿ ಸಂಗ್ರಹಿಸಿಟ್ಟಿದ್ದ ಏಳು ಸಾಗುವಾನಿ ಮರದ ತುಂಡುಗಳನ್ನು ವಶಪಡಿಸಿಕೊಂಡಿದೆ.
ಈ ಪ್ರಕರಣದಲ್ಲಿ ಸತ್ಯನಾರಾಯಣ, ಶರಣು ಹಾಗೂ ಅಶೋಕ ಎಂಬವರ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಕಾರ್ಯಾಚರಣೆ ಸಿಸಿಎಫ್ ಕೆ.ಟಿ. ಹನುಮಂತಪ್ಪ, ಡಿಎಫ್ಒ ಮೊಹಮ್ಮದ್ ಫಯಾಜುದ್ದೀನ್ ಹಾಗೂ ಸಾಗರ ಎಸಿಎಫ್ ಕೆ. ರವಿ ಅವರ ಮಾರ್ಗದರ್ಶನದಲ್ಲಿ ನಡೆದಿದ್ದು, ಸಾಗರ ವಲಯ ಅರಣ್ಯಾಧಿಕಾರಿ ಬಿ. ಅಣ್ಣಪ್ಪ, ಚೋರಡಿ ಡಿಆರ್ಎಫ್ಒ ಕಾಮನಾಯ್ಕ್ ಸೇರಿದಂತೆ ಅರಣ್ಯ ಸಿಬ್ಬಂದಿ ಪಾಲ್ಗೊಂಡಿದ್ದರು.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…