ಕಗಚಿ ಬಳಿ ಕಾಡಾನೆ ದಾಳಿ: ತೋಟ–ಗದ್ದೆ ನಾಶ, ಗ್ರಾಮಸ್ಥರಲ್ಲಿ ಆತಂಕ
ರಿಪ್ಪನ್ ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗಚಿ ಗ್ರಾಮದಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಪಡಿಸಿದ ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಭಯಭೀತಿಯ ವಾತಾವರಣ ನಿರ್ಮಾಣವಾಗಿದೆ.
ಕಗಚಿ ಗ್ರಾಮದ ನಿವಾಸಿ ಡಾಕಪ್ಪ ಬಿನ್ ಪುಟ್ಟಪ್ಪ ಅವರ ತೋಟಕ್ಕೆ ನುಗ್ಗಿದ ಕಾಡಾನೆ ಅಡಿಕೆ ಹಾಗೂ ಬಾಳೆಗಿಡಗಳನ್ನು ಮುರಿದು ಸಂಪೂರ್ಣವಾಗಿ ಹಾನಿಗೊಳಿಸಿದೆ. ಅಲ್ಲದೆ ತೋಟದ ಅಕ್ಕಪಕ್ಕದಲ್ಲಿರುವ ಗದ್ದೆಗಳಿಗೂ ಗಂಭೀರ ಹಾನಿ ಉಂಟಾಗಿದೆ.
ಗುರುವಾರ ರಾತ್ರಿ ತಳಲೆ ಹಾಗೂ ಕಗಚಿ ಭಾಗಗಳಲ್ಲಿ ತಿರುಗಾಡಿದ ಕಾಡಾನೆ, ಲದ್ದಿ ಹಾಕಿಕೊಂಡು ತೋಟದ ಪ್ರದೇಶಕ್ಕೆ ಪ್ರವೇಶಿಸಿ ಡಾಕಪ್ಪ ಅವರ ತೋಟವನ್ನು ನಾಶಪಡಿಸಿ ನಂತರ ಸಮೀಪದ ಗದ್ದೆಗಳಿಗೂ ಹಾನಿ ಮಾಡಿರುವುದಾಗಿ ತಿಳಿದುಬಂದಿದೆ.
ಸತತ ಕಾಡಾನೆ ಸಂಚಾರದಿಂದ ಗ್ರಾಮಸ್ಥರು ಆತಂಕದಲ್ಲಿದ್ದು, ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಆನೆ ನಿಯಂತ್ರಣ ಹಾಗೂ ಪರಿಹಾರ ಒದಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…