ಕಗಚಿ ಬಳಿ ಕಾಡಾನೆ ದಾಳಿ: ತೋಟ–ಗದ್ದೆ ನಾಶ, ಗ್ರಾಮಸ್ಥರಲ್ಲಿ ಆತಂಕ
ರಿಪ್ಪನ್ ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗಚಿ ಗ್ರಾಮದಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಪಡಿಸಿದ ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಭಯಭೀತಿಯ ವಾತಾವರಣ ನಿರ್ಮಾಣವಾಗಿದೆ.
ಕಗಚಿ ಗ್ರಾಮದ ನಿವಾಸಿ ಡಾಕಪ್ಪ ಬಿನ್ ಪುಟ್ಟಪ್ಪ ಅವರ ತೋಟಕ್ಕೆ ನುಗ್ಗಿದ ಕಾಡಾನೆ ಅಡಿಕೆ ಹಾಗೂ ಬಾಳೆಗಿಡಗಳನ್ನು ಮುರಿದು ಸಂಪೂರ್ಣವಾಗಿ ಹಾನಿಗೊಳಿಸಿದೆ. ಅಲ್ಲದೆ ತೋಟದ ಅಕ್ಕಪಕ್ಕದಲ್ಲಿರುವ ಗದ್ದೆಗಳಿಗೂ ಗಂಭೀರ ಹಾನಿ ಉಂಟಾಗಿದೆ.
ಗುರುವಾರ ರಾತ್ರಿ ತಳಲೆ ಹಾಗೂ ಕಗಚಿ ಭಾಗಗಳಲ್ಲಿ ತಿರುಗಾಡಿದ ಕಾಡಾನೆ, ಲದ್ದಿ ಹಾಕಿಕೊಂಡು ತೋಟದ ಪ್ರದೇಶಕ್ಕೆ ಪ್ರವೇಶಿಸಿ ಡಾಕಪ್ಪ ಅವರ ತೋಟವನ್ನು ನಾಶಪಡಿಸಿ ನಂತರ ಸಮೀಪದ ಗದ್ದೆಗಳಿಗೂ ಹಾನಿ ಮಾಡಿರುವುದಾಗಿ ತಿಳಿದುಬಂದಿದೆ.
ಸತತ ಕಾಡಾನೆ ಸಂಚಾರದಿಂದ ಗ್ರಾಮಸ್ಥರು ಆತಂಕದಲ್ಲಿದ್ದು, ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಆನೆ ನಿಯಂತ್ರಣ ಹಾಗೂ ಪರಿಹಾರ ಒದಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…