ಕಾರಗೋಡುವಿನಲ್ಲಿ ನಾಳೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಗ್ರಾಮೀಣ ಹಾಗೂ ಸಿಟಿ ತಂಡಗಳ ಪೈಪೋಟಿ

The second annual floodlight volleyball tournament will be held on January 17, 2026, at Kargodu village near Ripponpet, Shivamogga district.

ಕಾರಗೋಡುವಿನಲ್ಲಿ ನಾಳೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಗ್ರಾಮೀಣ ಹಾಗೂ ಸಿಟಿ ತಂಡಗಳ ಪೈಪೋಟಿ

ರಿಪ್ಪನ್‌ಪೇಟೆ : ಇಲ್ಲಿನ ಕಾರಗೋಡು–ಕರಡಿಗ–ಬೆಳಕೋಡು ಗ್ರಾಮಸ್ಥರ ಸಹಕಾರದೊಂದಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಹಾಗೂ ಅಪ್ಪು ಗೆಳೆಯರ ಬಳಗದ ಆಶ್ರಯದಲ್ಲಿ ದ್ವಿತೀಯ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.

ಈ ಪಂದ್ಯಾವಳಿ 2026ರ ಜನವರಿ 17ರಂದು (ಶನಿವಾರ) ಸಂಜೆ 7 ಗಂಟೆಗೆ ಕಾರಗೋಡು ಗ್ರಾಮದಲ್ಲಿ ನಡೆಯಲಿದ್ದು ರಾಜ್ಯದ ವಿವಿಧ ಭಾಗಗಳಿಂದ ಗ್ರಾಮೀಣ ಹಾಗೂ ನಗರ ತಂಡಗಳು ಪಾಲ್ಗೊಳ್ಳಲಿವೆ.

ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಆಕರ್ಷಕ ನಗದು ಬಹುಮಾನ ಮತ್ತು ಟ್ರೋಫಿಗಳನ್ನು ನೀಡಲಾಗುತ್ತದೆ.
ಪ್ರಥಮ ಬಹುಮಾನ ₹12,000, ದ್ವಿತೀಯ ಬಹುಮಾನ ₹8,000, ತೃತೀಯ ಬಹುಮಾನ ₹6,000 ಹಾಗೂ ಚತುರ್ಥ ಬಹುಮಾನ ₹4,000 ನಗದು ಹಾಗೂ ಟ್ರೋಫಿ ನೀಡಲಾಗುತ್ತದೆ. ಜೊತೆಗೆ ಬೆಸ್ಟ್ ಆಟ್ಯಾಕರ್, ಬೆಸ್ಟ್ ಪಾಸರ್ ಮತ್ತು ಬೆಸ್ಟ್ ಲಿಬ್ರೋ ಪ್ರಶಸ್ತಿಗಳು ಇರಲಿವೆ.

ತಂಡಗಳಿಗಾಗಿ ಪ್ರವೇಶ ಶುಲ್ಕ ₹900 ನಿಗದಿಪಡಿಸಲಾಗಿದೆ. ಗ್ರಾಮೀಣ ತಂಡಗಳಿಗೆ ಪ್ರತ್ಯೇಕ ಪೋಲ್ ವ್ಯವಸ್ಥೆ ಮಾಡಲಾಗಿದ್ದು, ಗ್ರಾಮೀಣ ಆಟಗಾರರಿಗೆ ಮಾತ್ರ ಅವಕಾಶ ನೀಡಲಾಗಿದೆ. ಕ್ಲಬ್ ಪಂದ್ಯಗಳಲ್ಲಿ ಭಾಗವಹಿಸಿರುವ ಆಟಗಾರರಿಗೆ ಗ್ರಾಮೀಣ ಪೋಲ್‌ನಲ್ಲಿ ಅವಕಾಶ ಇರುವುದಿಲ್ಲ. ಸಿಟಿ ತಂಡಗಳಿಗೆ ಮುಕ್ತ ಅವಕಾಶವಿದ್ದು, ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.

ಪಂದ್ಯಾವಳಿಯಲ್ಲಿ ಭಾಗವಹಿಸಲು ಇಚ್ಛಿಸುವ ತಂಡಗಳು 2026ರ ಜನವರಿ 16ರೊಳಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಎಲ್ಲಾ ತಂಡಗಳು ಪಂದ್ಯ ದಿನ ಸಂಜೆ 7 ಗಂಟೆಯೊಳಗೆ ಸ್ಥಳಕ್ಕೆ ಹಾಜರಾಗಬೇಕು. ಅಸಭ್ಯ ವರ್ತನೆ ತೋರಿಸುವ ತಂಡಗಳನ್ನು ಪಂದ್ಯಾವಳಿಯಿಂದ ಹೊರಹಾಕಲಾಗುವುದು. ವ್ಯವಸ್ಥಾಪಕರು ಹಾಗೂ ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9902477782, 8277126915, 9008145561, 8861877056

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

3 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

9 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago