ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ
ರಿಪ್ಪನ್ಪೇಟೆ;-ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯುವ ವಿಜೃಂಬಣೆಯೊಂದಿಗೆ ಜರುಗಿತು.
ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ದೇವಿಯ ವಿಶೇಷ ಪೂಜೆ ಹೂವಿನ ಅಲಂಕಾರ ಪೂಜೆಯೊಂದಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನೆರವೇರಿತು.
ದೇವಿಯ ಜಾತ್ರಾ ಮಹೋತ್ಸವದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನಾಶೀರ್ವಾದ ಪಡೆದರು.
ವರ್ಷದಲ್ಲಿ ಎರಡು ಭಾರಿ ಆಚರಿಸುವ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯು ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರ ಆಚರಿಸುವುದು ವಿಶೇಷವಾಗಿದೆ.
ಬೆಳಗ್ಗೆಯಿಂದಲೇ ದೇವಸ್ಥಾನದ ಬಳಿ ಭಕ್ತರು ಸರತಿ ಸಾಲಿನಲ್ಲಿ ನಿಂತು ಹಣ್ಣು ಕಾಯಿ ಹರಕೆಯನ್ನು ದೇವಿಗೆ ಸಮರ್ಪಿಸುತ್ತಿದ್ದ ಸುತ್ತಮುತ್ತಲಿನ ರೈತ ನಾಗರೀಕರು ಜಾತ್ರೆಯಲ್ಲಿ ಪಾಲ್ಗೊಂಡು ಕಾರ ಮಂಡಕ್ಕಿ ಬೆಂಡು ಬತ್ತಾಸು ಮೈಸೂರು ಪಾಕು.ಜಿಲೇಬಿ ಹೀಗೆ ಮಕ್ಕಳ ಅಟಿಕೆ ಸಾಮಾನುಗಳ ಅಂಗಡಿಗಳ ಮುಂದೆ ಭಕ್ತ ಸಮೂಹ ಜಮಾಯಿಸಿತು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್