ರಾಷ್ಟ್ರಮಟ್ಟದ ಹ್ಯಾಂಡ್ಬಾಲ್ಗೆ ಲಕ್ಷ್ಮೀ ಸುರೇಶ್ ಸತ್ಯಪ್ಪನವರ್ ಆಯ್ಕೆ |
ಶಿಗ್ಗಾವಿ ತಾಲ್ಲೂಕಿನ ಜಕ್ಕನಕಟ್ಟಿಗೆ ಹೆಮ್ಮೆಯ ಸಾಧನೆ
ಬಂಕಾಪುರ್: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಜಕ್ಕನಕಟ್ಟಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಲಕ್ಷ್ಮೀ ಸುರೇಶ್ ಸತ್ಯಪ್ಪನವರ್ ರಾಷ್ಟ್ರಮಟ್ಟದ ಹ್ಯಾಂಡ್ಬಾಲ್ಗೆ ಆಯ್ಕೆಯಾಗುವ ಮೂಲಕ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ರಾಜಸ್ಥಾನದ ಚಿತ್ತೋರಗಢದಲ್ಲಿ ನಡೆಯುತ್ತಿರುವ 69ನೇ ರಾಷ್ಟ್ರಮಟ್ಟದ 14 ವರ್ಷದೊಳಗಿನ ಬಾಲಕಿಯರ ಹ್ಯಾಂಡ್ಬಾಲ್ ಚಾಂಪಿಯನ್ಶಿಪ್ನಲ್ಲಿ ಲಕ್ಷ್ಮೀ ಅವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಸ್ಪರ್ಧಿಸುತ್ತಿದ್ದಾರೆ. ಶಿಸ್ತಿನ ತರಬೇತಿ, ನಿರಂತರ ಅಭ್ಯಾಸ ಮತ್ತು ಕಠಿಣ ಪರಿಶ್ರಮದ ಫಲವಾಗಿ ಈ ಮಹತ್ವದ ಸಾಧನೆ ಸಾಧ್ಯವಾಗಿದೆ.
ಲಕ್ಷ್ಮೀ ಅವರ ಈ ಸಾಧನೆಗೆ ಶಾಲೆಯ ಶಿಕ್ಷಕರು, ಪಾಲಕರು, ಶಾಲಾ ಮಂಡಳಿ ಸದಸ್ಯರು, ಜಕ್ಕನಕಟ್ಟಿ ಗ್ರಾಮದ ಗ್ರಾಮಸ್ಥರು ಹಾಗೂ ಸ್ಥಳೀಯ ಶಾಸಕರು ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ಹಂತಗಳಿಗೂ ಶುಭಾಶಯಗಳನ್ನು ಕೋರಿದ್ದಾರೆ.
ವರದಿ: ನಿಂಗರಾಜ್ ಕುಡಲ್
ಹಾವೇರಿ ಜಿಲ್ಲೆ, ಬಂಕಾಪುರ್
ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…
ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್ಗೆ ಕರೆ VHP and Bajrang Dal…
ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…