HOSANAGARA | ಮಾವಿನಕಟ್ಟೆ ಬಳಿ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು
ಹೊಸನಗರ ತಾಲೂಕಿನ ಮಾವಿನಕಟ್ಟೆ ಬಳಿ ರಸ್ತೆ ಮಧ್ಯೆ ತೆರೆದಿದ್ದ ಗುಂಡಿಗೆ ಬೈಕ್ ಬಿದ್ದು ಚೇತನ್ ಮೊಗವೀರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೂಚನಾ ಫಲಕಗಳಿಲ್ಲದಿರುವುದು ಅಪಘಾತಕ್ಕೆ ಕಾರಣ.
ಹೊಸನಗರ: ತಾಲೂಕಿನ ಮಾವಿನಕಟ್ಟೆ ಸಮೀಪ ಶುಕ್ರವಾರ ತಡ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಮಾವಿನಕಟ್ಟೆ ಗ್ರಾಮದ ಚೇತನ್ ಮೊಗವೀರ ಎಂದು ಗುರುತಿಸಲಾಗಿದೆ.
ಉಡುಪಿ ನಗರದ ಬಟ್ಟೆ ಅಂಗಡಿಯೊಂದರಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದ ಚೇತನ್ ಇಂದು ರಾತ್ರಿ ಸುಮಾರು 8.45ರಿಂದ 9.00 ಗಂಟೆ ನಡುವಿನ ವೇಳೆಯಲ್ಲಿ ಹೊಸನಗರದಿಂದ ತಮ್ಮ ಊರಾದ ಮಾವಿನಕಟ್ಟೆಗೆ ಎನ್ಎಸ್ ಬೈಕ್ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಮಾವಿನಕಟ್ಟೆ ಬಳಿ ರಸ್ತೆ ಮಧ್ಯಭಾಗದಲ್ಲಿ ಗುಂಡಿ ತೆಗೆಯಲಾಗಿದ್ದು, ಮೋರಿ ಕಾಮಗಾರಿಗಾಗಿ ರಸ್ತೆ ಬದಿಯಲ್ಲಿ ಜಲ್ಲಿ ಹಾಗೂ ಮರಳನ್ನು ಹಾಕಲಾಗಿತ್ತು. ಆದರೆ ಸ್ಥಳದಲ್ಲಿ ಯಾವುದೇ ಸೂಚನಾ ಫಲಕಗಳು ಅಥವಾ ಎಚ್ಚರಿಕೆ ವ್ಯವಸ್ಥೆ ಇರಲಿಲ್ಲ ಎನ್ನಲಾಗಿದೆ. ಇದರಿಂದ ಬೈಕ್ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಪರಿಣಾಮ ಚೇತನ್ ಮೊಗವೀರ ಅವರಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಿನ್ನೆ ಮಾತ್ರ ತಮ್ಮ ಊರಾದ ಮಾವಿನಕಟ್ಟೆಗೆ ಆಗಮಿಸಿದ್ದ ಚೇತನ್ ಅವರ ಅಕಾಲಿಕ ನಿಧನದಿಂದ ಕುಟುಂಬಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಮೃತರಿಗೆ ಒಬ್ಬ ತಮ್ಮ ಹಾಗೂ ಒಬ್ಬ ತಂಗಿ ಇದ್ದು, ಅವರ ನಿಧನದಿಂದ ಕುಟುಂಬದವರಲ್ಲದೆ ಗ್ರಾಮದಲ್ಲಿಯೂ ಶೋಕದ ವಾತಾವರಣ ಆವರಿಸಿದೆ.
ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…