ರಾಜಕೀಯ ದ್ವೇಷದ ಆರೋಪ: ಗರ್ತಿಕೆರೆ ಕೆಪಿಎಸ್ ಶಾಲೆ ಮುಂದೆ ಪೋಷಕರ ಆಕ್ರೋಶ

Parents staged a protest at Gartheekere KPS government school opposing the transfer of teacher Satyanarayan, alleging political interference and demanding withdrawal of the transfer order.

ತೀರ್ಥಹಳ್ಳಿ ತಾಲ್ಲೂಕಿನ ಗರ್ತಿಕೆರೆ ಕೆಪಿಎಸ್ ಸರ್ಕಾರಿ ಶಾಲೆಯ ಶಿಕ್ಷಕ ಸತ್ಯನಾರಾಯಣ್ ಅವರನ್ನು ವರ್ಗಾವಣೆಗೊಳಿಸುವಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿ ಪೋಷಕರು ಹಾಗೂ ಗ್ರಾಮಸ್ಥರು ಶಾಲೆ ಎದುರು ಪ್ರತಿಭಟನೆ ನಡೆಸಿದರು. ರಾಜಕೀಯ ದ್ವೇಷದ ಹಿನ್ನಲೆಯಲ್ಲಿ ಉತ್ತಮ ಶಿಕ್ಷಕನನ್ನು ಅನ್ಯಾಯವಾಗಿ ವರ್ಗಾವಣೆಗೊಳಿಸಲಾಗಿದೆ ಎಂದು ಆರೋಪಿಸಿ ಆದೇಶವನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಶಾಲೆಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಸತ್ಯನಾರಾಯಣ್ ಅವರು ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಮಕ್ಕಳ ಶೈಕ್ಷಣಿಕ ಸಾಧನೆಗೂ ಪೋಷಕರ ವಿಶ್ವಾಸಕ್ಕೂ ಕಾರಣರಾಗಿದ್ದಾರೆ ಎಂದು ಪೋಷಕರು ಹೇಳಿದರು. ಇಂತಹ ಶಿಕ್ಷಕರನ್ನು ವರ್ಗಾವಣೆಗೊಳಿಸುವುದು ಶಾಲೆಯ ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆ ತರಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಪ್ರತಿಭಟನೆಯ ವೇಳೆ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ವಿರುದ್ಧವೂ ಗಂಭೀರ ಆರೋಪಗಳು ಕೇಳಿಬಂದವು. ರಾಜಕೀಯ ಕುಮ್ಮಕ್ಕಿನಿಂದ ಶಿಕ್ಷಕರನ್ನು ಟಾರ್ಗೆಟ್ ಮಾಡಿ ತೋಜೋವಧೆ ಮಾಡಲಾಗುತ್ತಿದೆ ಎಂದು ಪೋಷಕರು ಆರೋಪಿಸಿದರು. ಅಲ್ಲದೇ ಕೆಪಿಎಸ್ ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷ ಸೋಮಶೇಖರ್ ಅವರು ಖಾಸಗಿ ಶಾಲೆಯೊಂದರ ನಿರ್ದೇಶಕರಾಗಿದ್ದು, ತಮ್ಮ ಖಾಸಗಿ ಶಾಲೆಗೆ ಅನುಕೂಲವಾಗುವ ಉದ್ದೇಶದಿಂದ ಜಿಲ್ಲಾದ್ಯಂತ ಉತ್ತಮ ಹೆಸರು ಪಡೆದಿರುವ ಗರ್ತಿಕೆರೆ ಸರ್ಕಾರಿ ಶಾಲೆಯನ್ನು ಅವನತಿಯತ್ತ ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ಪ್ರಸ್ತುತ ಶಾಲಾಭಿವೃದ್ಧಿ ಸಮಿತಿಯನ್ನು ವಜಾಗೊಳಿಸಿ ನೂತನ ಸಮಿತಿಯನ್ನು ರಚಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಶಿಕ್ಷಕ ವರ್ಗಾವಣೆ ಆದೇಶವನ್ನು ಹಿಂತೆಗೆದುಕೊಳ್ಳುವ ಜೊತೆಗೆ ಶಾಲೆಯ ಹಿತದೃಷ್ಟಿಯಿಂದ ಪಾರದರ್ಶಕ ಆಡಳಿತವನ್ನು ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದರು.

ಆಗ್ರಹಗಳಿಗೆ ಸ್ಪಂದನೆ ದೊರಕದಿದ್ದರೆ, ಶಾಲೆಯಲ್ಲಿ ಓದುತ್ತಿರುವ ಎಲ್ಲಾ ಮಕ್ಕಳ ಟಿಸಿ ಪಡೆದು ಸಾಮೂಹಿಕವಾಗಿ ಬೇರೆ ಶಾಲೆಗಳಿಗೆ ದಾಖಲಿಸುವ ಕಠಿಣ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪೋಷಕರು ಎಚ್ಚರಿಕೆ ನೀಡಿದರು. ವಿಷಯದ ಕುರಿತು ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

5 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

22 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

24 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

1 day ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

1 day ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

1 day ago