Categories: Blog

RIPPONPETE | ಪೂಜಾ ಎಂ.ಎನ್‌ಗೆ ಗಣಿತಶಾಸ್ತ್ರದಲ್ಲಿ ಪಿಎಚ್.ಡಿ ಪದವಿ

Pooja M.N from Arasalu village near Ripponpet has been awarded a PhD in Mathematics by Kuvempu University. She completed her research under the guidance of Prof. S.K. Narasimhamurthy. Her achievement has been widely appreciated by her family and the academic community.

RIPPONPETE | ಪೂಜಾ ಎಂ.ಎನ್‌ಗೆ ಗಣಿತಶಾಸ್ತ್ರದಲ್ಲಿ ಪಿಎಚ್.ಡಿ ಪದವಿ

ರಿಪ್ಪನ್‌ಪೇಟೆ: ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮದ ಪೂಜಾ ಎಂ.ಎನ್ ಅವರು ಗಣಿತಶಾಸ್ತ್ರದಲ್ಲಿ ಪಿಎಚ್.ಡಿ ಪದವಿ ಪಡೆದು ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ್ದಾರೆ.

ಮೂಲತಃ ಶಿವಮೊಗ್ಗ ನಿವಾಸಿಗಳಾದ ಪೂಜಾ ಎಂ.ಎನ್ ಅವರು ಅರಸಾಳು ಗ್ರಾಮದ ರೋಹನ್ ಸಾಕ್ರೆ ಅವರ ಪತ್ನಿಯಾಗಿದ್ದಾರೆ. ಕುವೆಂಪು ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ “ಥಿಯರಿಟಿಕಲಿ ಇನ್ವೆಸ್ಟಿಗೇಷನ್ ಆಫ್ ಬೌಂಡರಿ ಲೇಯರ್ ಫ್ಲೋ ಅಂಡ್ ಹೀಟ್ ಟ್ರಾನ್ಸ್ಫರ್ ಓವರ್ ಸರ್ಟೈನ್ ಜಾಮಿಟ್ರೀಸ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನಿಸಲಾಗಿದೆ.

ಈ ಸಂಶೋಧನಾ ಕಾರ್ಯವನ್ನು ಕುವೆಂಪು ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಎಸ್.ಕೆ. ನರಸಿಂಹಮೂರ್ತಿ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಪೂಜಾ ಎಂ.ಎನ್ ಅವರು ಶಿವಮೊಗ್ಗ ನಿವಾಸಿಗಳಾದ ನಾಗರಾಜ್ ಮತ್ತು ಶಾರದ ದಂಪತಿಗಳ ಪುತ್ರಿಯಾಗಿದ್ದು, ಅವರ ಪತಿ ರೋಹನ್ ಸಾಕ್ರೆ ಅವರು ಅರಸಾಳು ಗ್ರಾಮದ ರಾಜು ಟೈಲರ್ ಮತ್ತು ವಿಜಯ ದಂಪತಿಗಳ ಪುತ್ರರಾಗಿದ್ದಾರೆ.

ಪೂಜಾ ಎಂ.ಎನ್ ಅವರ ಈ ಶೈಕ್ಷಣಿಕ ಸಾಧನೆಗೆ ಕುಟುಂಬಸ್ಥರು, ಬಂಧುಗಳು ಹಾಗೂ ಶೈಕ್ಷಣಿಕ ವಲಯದ ಗಣ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

10 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

11 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

11 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

13 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

17 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

17 hours ago