A private bus timing dispute in Shivamogga’s Ravindra Nagar turned violent as a bus owner was attacked with rods and sticks. Police register case.
ಶಿವಮೊಗ್ಗ: ಖಾಸಗಿ ಬಸ್ಗಳ ಸಮಯ ನಿಗದಿ ವಿಚಾರವಾಗಿ ಶಿವಮೊಗ್ಗದ ರವೀಂದ್ರ ನಗರದಲ್ಲಿ ಗಲಾಟೆ ನಡೆದಿದ್ದು, ಬಸ್ ಮಾಲೀಕರೊಬ್ಬರ ಮೇಲೆ ಮತ್ತೊಂದು ಸಂಸ್ಥೆಯ ಬಸ್ಸಿನ ಚಾಲಕ ಹಾಗೂ ಕಂಡಕ್ಟರ್ ಸೇರಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.
ಮೋಟಾರ್ ಸರ್ವಿಸ್ ಬಸ್ನ ಮಾಲೀಕ ವಿಜಯಕುಮಾರ್ ಅವರು ತಮ್ಮ ಬಸ್ಸುಗಳ ಸಮಯದ ವಿಚಾರವಾಗಿ ಉಷಾ ಸರ್ಕಲ್ ಸಮೀಪದ ರವೀಂದ್ರ ನಗರ ಬಸ್ ನಿಲ್ದಾಣಕ್ಕೆ ತೆರಳಿದ್ದರು. ಈ ವೇಳೆ ಇನ್ನೊಂದು ಖಾಸಗಿ ಬಸ್ ನಿಗದಿತ ಸಮಯವನ್ನು ಮೀರಿ ನಿಲ್ದಾಣದಿಂದ ತಡವಾಗಿ ಹೊರಡುತ್ತಿರುವುದನ್ನು ಗಮನಿಸಿ, ಸಂಬಂಧಿತ ಬಸ್ಸಿನ ಕಂಡಕ್ಟರ್ಗೆ ಪ್ರಶ್ನಿಸಿದ್ದಾರೆ.
ಇದರಿಂದ ಕೆರಳಿದ ಕಂಡಕ್ಟರ್, ಚಾಲಕ ಹಾಗೂ ಅವರ ಜೊತೆಗಿದ್ದ ಮೂರ್ನಾಲ್ಕು ಮಂದಿ ವಿಜಯಕುಮಾರ್ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು, ದೊಣ್ಣೆ ಹಾಗೂ ರಾಡ್ಗಳಿಂದ ತಲೆ ಮತ್ತು ಸೊಂಟಕ್ಕೆ ಹೊಡೆದು ಗಾಯಗೊಳಿಸಿದ್ದಲ್ಲದೆ, ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಗಾಯಗೊಂಡ ವಿಜಯಕುಮಾರ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಗೆ ಸಂಬಂಧಿಸಿ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Shivamogga bus dispute, private bus assault Shivamogga, Ravindra Nagar bus clash, Karnataka private bus news, Shivamogga crime news
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…