ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಅಪೂರ್ವ ಗರುಡ ಶಿಲ್ಪದ ಮಾಸ್ತಿಕಲ್ಲು ಪತ್ತೆ: ವಿಜಯನಗರ ಕಾಲದ ಅಪರೂಪದ ಶಾಸನ

Rare Garuda Sculpted Mastikallu Discovered in Ripponpete Region, Karnataka

A rare Vijayanagara-era Mastikallu with Garuda sculpture and inscription has been discovered in the Ripponpete region of Shivamogga district, Karnataka.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶಶಿಧರ ಭಟ್ಟರ ತೋಟದಲ್ಲಿ ಅಪರೂಪದ ಗರುಡ ಶಿಲ್ಪ ಹೊಂದಿರುವ ಮಾಸ್ತಿಕಲ್ಲು ಪತ್ತೆಯಾಗಿದೆ. ವಿಜಯನಗರ ಕಾಲಘಟ್ಟಕ್ಕೆ ಸೇರಿದ ಈ ಶಾಸನವು ಇತಿಹಾಸ ಹಾಗೂ ಪುರಾತತ್ವದ ದೃಷ್ಟಿಯಿಂದ ಮಹತ್ವ ಪಡೆದಿದೆ.

ಈ ಮಾಸ್ತಿಕಲ್ಲು ಸುಮಾರು ೩೨ ಇಂಚು ಉದ್ದ ಹಾಗೂ ೧೫ ೧/೨ ಇಂಚು ಅಗಲ ಹೊಂದಿದ್ದು, ಮೇಲ್ಭಾಗದಲ್ಲಿ ಪೂರ್ಣ ಕುಂಭ ಶಿಲ್ಪವಿದೆ. ಮೊದಲ ಪಟ್ಟಿಕೆಯಲ್ಲಿ ಗರುಡ ಶಿಲ್ಪ ಕೆತ್ತಲಾಗಿದ್ದು, ಎರಡನೇ ಪಟ್ಟಿಯಲ್ಲಿ ಒಬ್ಬ ಪುರುಷ ಮತ್ತು ಮೂವರು ಮಹಿಳೆಯರ ಚಿತ್ರಣ ಇದೆ.

ಒಂದು ಚಿತ್ರದಲ್ಲಿ ಎತ್ತಿದ ತೋಳು, ಕೈಪಟ್ಟಿ, ಎರಡು ಬಳೆ ಹಾಗೂ ಬೆರಳ ಮಧ್ಯೆ ನಿಂಬೆಹಣ್ಣು ಹಿಡಿದಿರುವ ಶಿಲ್ಪ ಕಾಣಸಿಗುತ್ತದೆ. ಇದಕ್ಕೆ ಕೆಳಭಾಗದಲ್ಲಿ ೭ ಸಾಲಿನ ಶಾಸನವಿದ್ದು, ಅಂತಿಮ ಪಟ್ಟಿಕೆಯಲ್ಲಿ ಪಲ್ಲಕ್ಕಿಯೊಂದಿಗೆ ಸಾಗುತ್ತಿರುವ ಇಬ್ಬರು ಪುರುಷರ ಶಿಲ್ಪವಿದೆ.

ಶಾಸನದ ವಿವರದಂತೆ, ಬೊಮ್ಮದೇವಗೌಡ ಎಂಬವರು ಮರಣ ಹೊಂದಿದ ನಂತರ, ಅವರ ಪತ್ನಿಯರಾದ ಗುರಾಕಾಯಿ, ಬೊಮ್ಮಾಯಿ ಮತ್ತು ಲಿಂಗಾಯಿ ಸಹಗಮನ (ಸತಿ) ಮಾಡಿ ಮೃತರಾದ ಬಗ್ಗೆ ಉಲ್ಲೇಖಿಸಲಾಗಿದೆ. ಈ ಶಾಸನದ ಸಂಶೋಧನೆಯನ್ನು ಆದಿತ್ಯ ನಂಜವಳ್ಳಿ ಹಾಗೂ ಗಣೇಶ್ ಕೆ.ಎನ್. (ಕೋಣಂದೂರು) ನಡೆಸಿದ್ದಾರೆ.

ರಾಜ್ಯ ಪುರಾತತ್ವ ಇಲಾಖೆ ನಿರ್ದೇಶಕರಾದ ಡಾ. ಶೆಜೇಶ್ವರ ಅವರು, ಮಾಸ್ತಿಕಲ್ಲಿನಲ್ಲಿರುವ ಗರುಡ ಶಿಲ್ಪವು ವೈಷ್ಣವ ಧರ್ಮಕ್ಕೆ ಸೇರಿದ ವ್ಯಕ್ತಿಯ ಮರಣವನ್ನು ಸೂಚಿಸುತ್ತದೆ ಎಂದು ತಿಳಿಸಿದ್ದು, ಇದು ಅತ್ಯಂತ ಅಪರೂಪದ ಮಾಸ್ತಿಕಲ್ಲು ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಶಾಸನ ಸಂಶೋಧಕರಾದ ರಮೇಶ್ ಬಿ. ಹಿರೇಜಂಬೂರು ಅವರು, ಮಾಸ್ತಿಕಲ್ಲಿನಲ್ಲಿ ಗರುಡ ಶಿಲ್ಪ ಇರುವ ಉದಾಹರಣೆಗಳು ತೀರಾ ವಿರಳವಾಗಿದ್ದು, ಈ ಭಾಗದಲ್ಲಿ ಕಂಡುಬಂದ ಮೊದಲ ಶಾಸನವಾಗಿರಬಹುದು ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಸುಮಾರು ೨೫,೦೦೦ಕ್ಕೂ ಹೆಚ್ಚು ಶಾಸನಗಳು ಕಂಡುಬಂದಿದ್ದರೂ, ಅಪರೂಪದ ಶಿಲ್ಪಗಳನ್ನು ಒಳಗೊಂಡ ಶಾಸನಗಳು ಹೊಸನಗರ ತಾಲೂಕಿನಲ್ಲಿ ಹೆಚ್ಚಾಗಿ ಕಾಣಿಸುತ್ತವೆ. ಈ ಭಾಗದಲ್ಲಿ ಪತ್ತೆಯಾಗಿರುವ ಮಿಥುನ ಶಿಲ್ಪದ ವೀರಗಲ್ಲುಗಳು ರಾಜ್ಯದ ಬೇರೆ ಯಾವ ಭಾಗದಲ್ಲೂ ಕಾಣಸಿಗದಂತಿದ್ದು, ಇದೀಗ ಪತ್ತೆಯಾದ ಗರುಡ ಶಿಲ್ಪದ ಮಾಸ್ತಿಕಲ್ಲು ಕೂಡ ಈ ಪ್ರದೇಶದ ಪುರಾತತ್ವ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ.

Garuda Mastikallu, Vaishnavite stone inscription, Vijayanagara Empire Karnataka, ancient stone inscriptions, Ripponpete heritage site, rare archaeological discovery India, sati stone inscription, Karnataka history,

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 hour ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 hour ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 hours ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

6 hours ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

6 hours ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

7 hours ago