ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಹೊಸನಗರದಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ | ನಡೆದಿದ್ದೇನು..!!??

ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಹೊಸನಗರದಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ | ನಡೆದಿದ್ದೇನು..!!??

A private sleeper bus travelling from Hosanagar to Bengaluru caught fire while moving near Arasalu and Suduru villages in Shivamogga district. Eight passengers were injured in the incident.

ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ–ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಭಾರೀ ಅಪಘಾತ ಸಂಭವಿಸಿದೆ.ಅರಸಾಳು ಮತ್ತು ಸುಡೂರು ಗ್ರಾಮಗಳ ಮಧ್ಯೆ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಹೊಸನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ‘ಶ್ರೀ ಅನ್ನಪೂರ್ಣೇಶ್ವರಿ’ ಎಂಬ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಚಾಲಕ ಸೇರಿದಂತೆ ಸುಮಾರು 40 ಜನ ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು.ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡುದನ್ನು ಗಮನಿಸಿದ ಚಾಲಕ, ತಕ್ಷಣವೇ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆಸಿ ಬಸ್ ನಿಲ್ಲಿಸಿದ್ದಾನೆ. ಈ ವೇಳೆ ಗದ್ದಲ ಉಂಟಾಗಿ ಕೆಲವರು ಬಸ್‌ನಿಂದ ಜಿಗಿದು ರಕ್ಷಣೆ ಪಡೆದಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ ಚಲಿಸುತಿದ್ದ ಬಸ್ಸಿನಲ್ಲಿ ಮೊದಲು ಸುಟ್ಟ ವಾಸನೆ ಬರುತಿದ್ದು ಕೆಲಕ್ಷಣಗಳಲ್ಲೇ ಕೆಲವರು ಕಿರುಚುವ ಧ್ವನಿ‌ಕೇಳಿಸಿದೆ ಆ ನಂತರ ಎಕ್ಸಿಟ್ ಡೋರ್ ಮೂಲಕ ಹೊರಗೆ ಬಂದೆವು ಎನ್ನುತ್ತಾರೆ.

ಘಟನೆಯಲ್ಲಿ ಒಟ್ಟು ಮೂವತ್ತು ಜನರಿಗೆ ಗಾಯಗಳಾಗಿದ್ದು , ಎಂಟಕ್ಕೂ ಹೆಚ್ಚು ಜನರಿಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪ್ರಯಾಣಿಕರ ಲಗೇಜ್ ಗಳು ಬೆಂಕಿಗೆ ಅಹುತಿಯಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಅಂಬುಲೆನ್ಸ್ ಹಾಗೂ ಪೊಲೀಸರು ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಬೆಂಕಿಯ ತೀವ್ರತೆಗೆ ಖಾಸಗಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಈ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು,ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಘಟನೆಯ ವಿಷಯ ತಿಳಿಯುತಿದ್ದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಗಾಯಾಳುಗಳಿ ಸಾಂತ್ವಾನ ಹೇಳಿ ಧೈರ್ಯ ತುಂಬಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

1 hour ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

6 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

8 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

20 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

20 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

22 hours ago