Ripponpete police traced the vehicle involved in a hit and run accident near Suduru Gate within 24 hours, in which a 62-year-old man lost his life.
ಸೂಡೂರು ಬಳಿ ಹಿಟ್ ಅಂಡ್ ರನ್: 24 ಗಂಟೆಯೊಳಗೆ ಆರೋಪಿತ ವಾಹನ ಪತ್ತೆ, ಪೊಲೀಸರ ಕಾರ್ಯಾಚರಣೆ ಯಶಸ್ವಿ
ರಿಪ್ಪನ್ಪೇಟೆ: ಸೂಡೂರು ಗೇಟ್ ಸಮೀಪ ನಡೆದ ಹಿಟ್ ಅಂಡ್ ರನ್ ಅಪಘಾತ ಪ್ರಕರಣದಲ್ಲಿ, ಓರ್ವ ವ್ಯಕ್ತಿಯ ಸಾವಿಗೆ ಕಾರಣವಾದ ವಾಹನವನ್ನು ಕೇವಲ 24 ಗಂಟೆಯೊಳಗೆ ಪತ್ತೆಹಚ್ಚುವಲ್ಲಿ ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸೈ ರಾಜು ರೆಡ್ಡಿ ನೇತೃತ್ವದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಸೂಡೂರು ಗೇಟ್ ಬಳಿ ಬೈಕ್ಗೆ ಹಿಂಬದಿಯಿಂದ ಅನಾಮಧೇಯ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಹಣಗೆರೆ ಕಟ್ಟೆ ಗ್ರಾಮದ ನಿವಾಸಿ ಸುಬ್ರಹ್ಮಣ್ಯ (62) ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ದುರ್ಘಟನೆ ಹಿನ್ನೆಲೆಯಲ್ಲಿ ಪೊಲೀಸರು ತ್ವರಿತ ತನಿಖೆ ನಡೆಸಿ ಅಪಘಾತಕ್ಕೆ ಕಾರಣವಾದ ವಾಹನವನ್ನು ಪತ್ತೆಹಚ್ಚಿದ್ದಾರೆ.
ತನಿಖೆಯಲ್ಲಿ, ಕಲ್ಲುಪುಡಿ ಸಾಗಿಸುತ್ತಿದ್ದ ಹತ್ತು ಚಕ್ರದ ಲಾರಿ (ನೋಂದಣಿ ಸಂಖ್ಯೆ: KA 16 C 0275) ಸುಬ್ರಹ್ಮಣ್ಯ ಅವರು ಚಲಾಯಿಸುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಸುಬ್ರಹ್ಮಣ್ಯ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಘಟನೆಯ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಘಟನೆ ನಡೆದ 24 ಗಂಟೆಯೊಳಗೆ ಲಾರಿಯನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಂಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್, ರಾಮಚಂದ್ರ, ವಿಶ್ವನಾಥ್ ಹಾಗೂ ಅವಿನಾಶ್ ಭಾಗವಹಿಸಿದ್ದರು.
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…