Breaking
14 Jan 2026, Wed

ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಧ್ವನಿಯಾಗುವ “ಭಾರತಿ ಟೀಚರ್”

ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಧ್ವನಿಯಾಗುವ “ಭಾರತಿ ಟೀಚರ್”

ಕನ್ನಡ ಸಿನಿಮಾ ನಮ್ಮ ಭಾಷೆಯ ಉಸಿರು ಮತ್ತು ಸಂಸ್ಕೃತಿಯ ಪ್ರತಿಬಿಂಬ. ಒಂದು ಟಿಕೆಟ್ ಮೂಲಕ ಸಾವಿರಾರು ಕನ್ನಡ ಕಲಾವಿದರ ಕನಸುಗಳಿಗೆ ಬೆಂಬಲ ನೀಡಿ.

ಜನವರಿ 16ರಿಂದ ರಾಜ್ಯಾದ್ಯಂತ ಬಿಡುಗಡೆ | ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿನಯಿಸಿರುವ ಚಿತ್ರ

ಕನ್ನಡ ಭಾಷೆ ಹಾಗೂ ಸರ್ಕಾರಿ ಶಾಲೆಗಳ ಮಹತ್ವವನ್ನು ಸಾರುವ ಉದ್ದೇಶದೊಂದಿಗೆ ತಯಾರಾಗಿರುವ “ಭಾರತಿ ಟೀಚರ್” ಸಿನಿಮಾ ಜನವರಿ 16ರಂದು ರಾಜ್ಯಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದೆ. ವಿಶೇಷವೆಂದರೆ, ಈ ಚಿತ್ರದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ನಟ ಆದಿತ್ಯ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಭಾರತಿ ಟೀಚರ್ ಚಿತ್ರದ ಟ್ರೈಲರ್…

ಭಾರತಿ ಟೀಚರ್” ಎಂಬ ಶೀರ್ಷಿಕೆಯೇ ಕುತೂಹಲ ಹುಟ್ಟಿಸುವಂತಿದ್ದು, ಇತ್ತೀಚೆಗಷ್ಟೇ ಬಿಡುಗಡೆಯಾದ ಚಿತ್ರದ ಟೀಸರ್ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿದೆ. ರಾಘವೇಂದ್ರ ರೆಡ್ಡಿ ನಿರ್ಮಾಣದ ಈ ಚಿತ್ರಕ್ಕೆ ಎಂ.ಎಲ್. ಪ್ರಸನ್ನ ಅವರು ನಿರ್ದೇಶನ, ಸಂಗೀತ ಹಾಗೂ ಸಾಹಿತ್ಯದ ಹೊಣೆ ಹೊತ್ತಿದ್ದಾರೆ. ಗುರುರಾಜ್ ರೆಡ್ಡಿ ಸಹ-ನಿರ್ಮಾಪಕರಾಗಿದ್ದಾರೆ.

ಏಳನೇ ತರಗತಿ ವಿದ್ಯಾರ್ಥಿನಿಯ ದೊಡ್ಡ ಕನಸು

ಚಿತ್ರದ ಕಥೆ ಏಳನೇ ತರಗತಿ ಓದುತ್ತಿರುವ ಭಾರತಿ ಎಂಬ ಹುಡುಗಿಯ ಸುತ್ತ ನಡೆಯುತ್ತದೆ. ತನ್ನ ಊರಿನ ಪ್ರತಿಯೊಬ್ಬರೂ ಕನ್ನಡದಲ್ಲಿ ಓದಲು-ಬರೆಯಲು ಕಲಿಯಬೇಕು ಎಂಬ ದೃಢ ಸಂಕಲ್ಪ ಹೊಂದಿರುವ ಭಾರತಿ, ಆ ಕನಸನ್ನು ನನಸಾಗಿಸಲು ಎದುರಿಸುವ ಸವಾಲುಗಳು, ಅಡೆತಡೆಗಳು, ನೋವು-ನಲಿವು ಹಾಗೂ ಹೋರಾಟವೇ ಚಿತ್ರದ ಹೃದಯ. ಆಕೆಯ ಕನಸಿಗೆ ಶಿಕ್ಷಕರು ಬೆಂಬಲವಾಗಿ ನಿಂತು ಧೈರ್ಯ ತುಂಬುವ ಕಥಾನಕ ಪ್ರೇಕ್ಷಕರ ಮನ ಮುಟ್ಟುವಂತೆ ಚಿತ್ರಿಸಲಾಗಿದೆ.

ಬಲಿಷ್ಠ ತಾರಾಗಣ

ಚಿತ್ರದಲ್ಲಿ ಸಿಹಿಕಹಿ ಚಂದ್ರು, ಯಶಿಕಾ, ಗೋವಿಂದೇಗೌಡ, ಅಶ್ವಿನ್ ಹಾಸನ್, ದಿವ್ಯಾ ಅಂಚನ್, ಬೆನಕ ನಂಜಪ್ಪ, ರೋಹಿತ್ ರಾಘವೇಂದ್ರ, ಸೌಜನ್ಯಾ ಸುನಿಲ್, ಎಂ.ಜೆ. ರಂಗಸ್ವಾಮಿ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ. ಸಚಿವ ಸಂತೋಷ್ ಲಾಡ್ ಅವರ ವಿಶೇಷ ಪಾತ್ರವೂ ಚಿತ್ರದ ಪ್ರಮುಖ ಆಕರ್ಷಣೆಯಾಗಿದೆ.

ಸಂಗೀತ ಮತ್ತು ನಿರ್ಮಾಣ ವೈಶಿಷ್ಟ್ಯ

ಚಿತ್ರದಲ್ಲಿ ಒಟ್ಟು 10 ಹಾಡುಗಳು ಇದ್ದು, ಮಳವಳ್ಳಿ, ಮೈಸೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಸುಮಾರು 40 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಜನಸಾಮಾನ್ಯರಿಗೆ ಸುಲಭವಾಗಿ ತಲುಪುವ ಉದ್ದೇಶದಿಂದ ರಾಜ್ಯಾದ್ಯಂತ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ರೂ.50 ಟಿಕೆಟ್ ದರ ನಿಗದಿಪಡಿಸಲಾಗಿದೆ. ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

ಭಾರತಿ ಟೀಚರ್ ಚಿತ್ರದ ಟೀಸರ್

“ತೆರೆ ಮೇಲೆ ಪಾಠ ಹೇಳಲು ಬರ್ತಿದಾರೆ – ಭಾರತಿ ಟೀಚರ್”
ಕನ್ನಡ ಪ್ರೇಮ, ಶಿಕ್ಷಣದ ಮೌಲ್ಯ ಮತ್ತು ಸಾಮಾಜಿಕ ಜಾಗೃತಿಯನ್ನು ಒಟ್ಟಿಗೆ ಹೊತ್ತಿರುವ ಈ ಚಿತ್ರ, ಕುಟುಂಬ ಸಮೇತರಾಗಿ ನೋಡಬಹುದಾದ ಅರ್ಥಪೂರ್ಣ ಸಿನಿಮಾವಾಗಲಿದೆ ಎಂಬ ವಿಶ್ವಾಸ ಚಿತ್ರತಂಡದವರದ್ದು…

ಕನ್ನಡ ಸಿನಿಮಾ ನಮ್ಮ ಭಾಷೆಯ ಉಸಿರು, ನಮ್ಮ ಮಣ್ಣಿನ ಕಥೆ.
ತೆರೆಯ ಮೇಲೆ ಕಾಣುವ ಪ್ರತೀ ದೃಶ್ಯ ನಮ್ಮ ಬದುಕಿನ ಪ್ರತಿಬಿಂಬ.
ಒಂದು ಟಿಕೆಟ್ ಕೊಂಡಾಗ, ಸಾವಿರಾರು ಕನಸುಗಳಿಗೆ ಬೆಂಬಲ ನೀಡಿದಂತೇ.

ಇಂದು ಕನ್ನಡ ಸಿನಿಮಾ ನೋಡಿ – ನಾಳೆಗೆ ಕನ್ನಡ ಸಂಸ್ಕೃತಿಯನ್ನು ಉಳಿಸಿ.

– ರಫ಼ಿ ರಿಪ್ಪನ್‌ಪೇಟೆ

ಭಾರತಿ ಟೀಚರ್ ಚಿತ್ರದ ಸಾಂಗ್.,,
ಭಾರತಿ ಟೀಚರ್ ಚಿತ್ರದ ಸಾಂಗ್.,,
ಭಾರತಿ ಟೀಚರ್ ಚಿತ್ರದ ಸಾಂಗ್.,,

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Exit mobile version