ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಧ್ವನಿಯಾಗುವ “ಭಾರತಿ ಟೀಚರ್”
ಕನ್ನಡ ಸಿನಿಮಾ ನಮ್ಮ ಭಾಷೆಯ ಉಸಿರು ಮತ್ತು ಸಂಸ್ಕೃತಿಯ ಪ್ರತಿಬಿಂಬ. ಒಂದು ಟಿಕೆಟ್ ಮೂಲಕ ಸಾವಿರಾರು ಕನ್ನಡ ಕಲಾವಿದರ ಕನಸುಗಳಿಗೆ ಬೆಂಬಲ ನೀಡಿ.
ಜನವರಿ 16ರಿಂದ ರಾಜ್ಯಾದ್ಯಂತ ಬಿಡುಗಡೆ | ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿನಯಿಸಿರುವ ಚಿತ್ರ
ಕನ್ನಡ ಭಾಷೆ ಹಾಗೂ ಸರ್ಕಾರಿ ಶಾಲೆಗಳ ಮಹತ್ವವನ್ನು ಸಾರುವ ಉದ್ದೇಶದೊಂದಿಗೆ ತಯಾರಾಗಿರುವ “ಭಾರತಿ ಟೀಚರ್” ಸಿನಿಮಾ ಜನವರಿ 16ರಂದು ರಾಜ್ಯಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದೆ. ವಿಶೇಷವೆಂದರೆ, ಈ ಚಿತ್ರದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ನಟ ಆದಿತ್ಯ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
“ಭಾರತಿ ಟೀಚರ್” ಎಂಬ ಶೀರ್ಷಿಕೆಯೇ ಕುತೂಹಲ ಹುಟ್ಟಿಸುವಂತಿದ್ದು, ಇತ್ತೀಚೆಗಷ್ಟೇ ಬಿಡುಗಡೆಯಾದ ಚಿತ್ರದ ಟೀಸರ್ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿದೆ. ರಾಘವೇಂದ್ರ ರೆಡ್ಡಿ ನಿರ್ಮಾಣದ ಈ ಚಿತ್ರಕ್ಕೆ ಎಂ.ಎಲ್. ಪ್ರಸನ್ನ ಅವರು ನಿರ್ದೇಶನ, ಸಂಗೀತ ಹಾಗೂ ಸಾಹಿತ್ಯದ ಹೊಣೆ ಹೊತ್ತಿದ್ದಾರೆ. ಗುರುರಾಜ್ ರೆಡ್ಡಿ ಸಹ-ನಿರ್ಮಾಪಕರಾಗಿದ್ದಾರೆ.
ಏಳನೇ ತರಗತಿ ವಿದ್ಯಾರ್ಥಿನಿಯ ದೊಡ್ಡ ಕನಸು
ಚಿತ್ರದ ಕಥೆ ಏಳನೇ ತರಗತಿ ಓದುತ್ತಿರುವ ಭಾರತಿ ಎಂಬ ಹುಡುಗಿಯ ಸುತ್ತ ನಡೆಯುತ್ತದೆ. ತನ್ನ ಊರಿನ ಪ್ರತಿಯೊಬ್ಬರೂ ಕನ್ನಡದಲ್ಲಿ ಓದಲು-ಬರೆಯಲು ಕಲಿಯಬೇಕು ಎಂಬ ದೃಢ ಸಂಕಲ್ಪ ಹೊಂದಿರುವ ಭಾರತಿ, ಆ ಕನಸನ್ನು ನನಸಾಗಿಸಲು ಎದುರಿಸುವ ಸವಾಲುಗಳು, ಅಡೆತಡೆಗಳು, ನೋವು-ನಲಿವು ಹಾಗೂ ಹೋರಾಟವೇ ಚಿತ್ರದ ಹೃದಯ. ಆಕೆಯ ಕನಸಿಗೆ ಶಿಕ್ಷಕರು ಬೆಂಬಲವಾಗಿ ನಿಂತು ಧೈರ್ಯ ತುಂಬುವ ಕಥಾನಕ ಪ್ರೇಕ್ಷಕರ ಮನ ಮುಟ್ಟುವಂತೆ ಚಿತ್ರಿಸಲಾಗಿದೆ.
ಬಲಿಷ್ಠ ತಾರಾಗಣ
ಚಿತ್ರದಲ್ಲಿ ಸಿಹಿಕಹಿ ಚಂದ್ರು, ಯಶಿಕಾ, ಗೋವಿಂದೇಗೌಡ, ಅಶ್ವಿನ್ ಹಾಸನ್, ದಿವ್ಯಾ ಅಂಚನ್, ಬೆನಕ ನಂಜಪ್ಪ, ರೋಹಿತ್ ರಾಘವೇಂದ್ರ, ಸೌಜನ್ಯಾ ಸುನಿಲ್, ಎಂ.ಜೆ. ರಂಗಸ್ವಾಮಿ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ. ಸಚಿವ ಸಂತೋಷ್ ಲಾಡ್ ಅವರ ವಿಶೇಷ ಪಾತ್ರವೂ ಚಿತ್ರದ ಪ್ರಮುಖ ಆಕರ್ಷಣೆಯಾಗಿದೆ.
ಸಂಗೀತ ಮತ್ತು ನಿರ್ಮಾಣ ವೈಶಿಷ್ಟ್ಯ
ಚಿತ್ರದಲ್ಲಿ ಒಟ್ಟು 10 ಹಾಡುಗಳು ಇದ್ದು, ಮಳವಳ್ಳಿ, ಮೈಸೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಸುಮಾರು 40 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಜನಸಾಮಾನ್ಯರಿಗೆ ಸುಲಭವಾಗಿ ತಲುಪುವ ಉದ್ದೇಶದಿಂದ ರಾಜ್ಯಾದ್ಯಂತ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ರೂ.50 ಟಿಕೆಟ್ ದರ ನಿಗದಿಪಡಿಸಲಾಗಿದೆ. ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.
“ತೆರೆ ಮೇಲೆ ಪಾಠ ಹೇಳಲು ಬರ್ತಿದಾರೆ – ಭಾರತಿ ಟೀಚರ್”
ಕನ್ನಡ ಪ್ರೇಮ, ಶಿಕ್ಷಣದ ಮೌಲ್ಯ ಮತ್ತು ಸಾಮಾಜಿಕ ಜಾಗೃತಿಯನ್ನು ಒಟ್ಟಿಗೆ ಹೊತ್ತಿರುವ ಈ ಚಿತ್ರ, ಕುಟುಂಬ ಸಮೇತರಾಗಿ ನೋಡಬಹುದಾದ ಅರ್ಥಪೂರ್ಣ ಸಿನಿಮಾವಾಗಲಿದೆ ಎಂಬ ವಿಶ್ವಾಸ ಚಿತ್ರತಂಡದವರದ್ದು…
ಕನ್ನಡ ಸಿನಿಮಾ ನಮ್ಮ ಭಾಷೆಯ ಉಸಿರು, ನಮ್ಮ ಮಣ್ಣಿನ ಕಥೆ.
ತೆರೆಯ ಮೇಲೆ ಕಾಣುವ ಪ್ರತೀ ದೃಶ್ಯ ನಮ್ಮ ಬದುಕಿನ ಪ್ರತಿಬಿಂಬ.
ಒಂದು ಟಿಕೆಟ್ ಕೊಂಡಾಗ, ಸಾವಿರಾರು ಕನಸುಗಳಿಗೆ ಬೆಂಬಲ ನೀಡಿದಂತೇ.
ಇಂದು ಕನ್ನಡ ಸಿನಿಮಾ ನೋಡಿ – ನಾಳೆಗೆ ಕನ್ನಡ ಸಂಸ್ಕೃತಿಯನ್ನು ಉಳಿಸಿ.
– ರಫ಼ಿ ರಿಪ್ಪನ್ಪೇಟೆ
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…
ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…
ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್ ಅಸ್ತು Renukaswamy murder case takes…
ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to…