ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಆಯ್ಕೆ

Halagadde Umesh has been elected as the new President of the Taluk Okkligara Sangha during the office bearers’ selection meeting held at the Okkligara Community Hall.

ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಆಯ್ಕೆ

ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಸ್ಥಳೀಯ ಒಕ್ಕಲಿಗರ ಸಭಾಭವನದಲ್ಲಿ ಇತ್ತೀಚೆಗೆ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಈ ಆಯ್ಕೆ ನಡೆಯಿತು.

ಸಭೆಯಲ್ಲಿ ಸಂಘದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಏಕಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಜಯಶೀಲಪ್ಪ ಗೌಡ, ಕಾರ್ಯದರ್ಶಿಯಾಗಿ ರತ್ನಾಕರ್ ಗುಂಪಿಗೆ ಹಾಗೂ ಖಜಂಚಿಯಾಗಿ ಅಂಕಿತ್ ಮೇಕೇರಿ ಅವರನ್ನು ಆಯ್ಕೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಸಂಘದ ನಿರ್ದೇಶಕರಾಗಿ ವಾಟಗದ್ದೆ ದಿನೇಶ್, ಪೂರ್ಣೇಶ್ ಮಲೆಬೈಲ್, ವೆಂಕಟೇಶ್ ಹೆಗಡೆ, ಎಸಿ ಪ್ರಕಾಶ್, ಕೃಷ್ಣಮೂರ್ತಿ, ಸುರೇಶ್ ಕಣಕಿ ಆದಿರಾಜ್, ವೀಣಾ ಪುರುಷೋತ್ತಮ್, ಧರ್ಮಪ್ಪ ನಿಲ್ಸ್ಕಲ ಹಾಗೂ ಶ್ರೀನಿವಾಸ ಪ್ರೀತಮ್ ಅವರನ್ನು ಆಯ್ಕೆ ಮಾಡಲಾಯಿತು.

ನೂತನ ಪದಾಧಿಕಾರಿಗಳ ಆಯ್ಕೆಯ ನಂತರ ಮಾತನಾಡಿದ ಅಧ್ಯಕ್ಷ ಹಾಲಗದ್ದೆ ಉಮೇಶ್, ಸಂಘವನ್ನು ಇನ್ನಷ್ಟು ಬಲಿಷ್ಠಗೊಳಿಸುವುದರ ಜೊತೆಗೆ ಸಮಾಜಮುಖಿ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ಸಂಘದ ಸದಸ್ಯರು ಹಾಗೂ ಹಿರಿಯರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 hour ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

1 hour ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

4 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

4 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

7 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

7 hours ago