ಖಾತೆ ಬದಲಾವಣೆಗೆ ಲಂಚದ ಡೀಲ್ – ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ
A Village Accountant was caught red-handed by Lokayukta police while accepting a ₹1 lakh bribe at a government employees’ canteen in Shikaripur, linked to a land khata transfer case.
ಶಿಕಾರಿಪುರ: ಜಮೀನಿನ ಖಾತೆ ಬದಲಾವಣೆಗೆ ಲಂಚ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಲೆಗೆ ಬೀಳಿಸಿದ್ದಾರೆ. ಚಿಕ್ಕಜಂಬೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಅವರು ಪಟ್ಟಣದ ಸರ್ಕಾರಿ ನೌಕರರ ಕ್ಯಾಂಟೀನ್ನಲ್ಲಿ ₹1 ಲಕ್ಷ ಲಂಚ ಪಡೆಯುವ ವೇಳೆ ಬಂಧಿತರಾಗಿದ್ದಾರೆ.
ಚಿಕ್ಕಜಂಬೂರು ಗ್ರಾಮದ ಜಿಕ್ರಿಯಾ ಬೇಗ್ ಅವರು ತಮ್ಮ ತಂದೆಯ ವಿಲ್ಪತ್ರದ ಆಧಾರದಲ್ಲಿ ಜಮೀನಿನ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕ್ರಿಯೆ ಮುಗಿಸಲು ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಅವರು ಒಟ್ಟು ₹4 ಲಕ್ಷ ಲಂಚ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಮೊದಲ ಕಂತಾಗಿ ₹1 ಲಕ್ಷವನ್ನು ಸರ್ಕಾರಿ ನೌಕರರ ಕ್ಯಾಂಟೀನ್ನಲ್ಲಿ ನೀಡುವಂತೆ ಸೂಚಿಸಿದ್ದರು ಎನ್ನಲಾಗಿದೆ.
ಲಂಚ ಬೇಡಿಕೆ ಸಂಬಂಧ ಜಿಕ್ರಿಯಾ ಬೇಗ್ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಮೈಲಾರ ಹಾಗೂ ಸಿಬ್ಬಂದಿ ಬಲೆ ಬೀಸಿ ಕಾರ್ಯಾಚರಣೆ ನಡೆಸಿದರು. ನಿಗದಿತ ಸ್ಥಳದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಬಂಧನದ ಬಳಿಕ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ. ಸರ್ಕಾರಿ ಅಧಿಕಾರಿಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಇಂತಹ ದಾಳಿಗಳನ್ನು ಮುಂದುವರಿಸಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…