ಝಕಿಯಾ ಕೊಲೆ ಪ್ರಕರಣದಲ್ಲಿ ಶಾಕಿಂಗ್ ಟ್ವಿಸ್ಟ್: ಮದುವೆಯಾಗಬೇಕಿದ್ದವನೇ ಹಂತಕ!

Dharwad rural police solved the Zakia Mulla murder case. A shocking twist reveals the man she was supposed to marry strangled her following a dispute over marriage talks.

ಧಾರವಾಡ (ಜ.22): ನಗರದ ಹೊರವಲಯದ ಮನಸೂರು ರಸ್ತೆಯಲ್ಲಿರುವ ಡೈರಿಯೊಂದರ ಬಳಿ ಪತ್ತೆಯಾಗಿದ್ದ 21 ವರ್ಷದ ಯುವತಿ ಝಕಿಯಾ ಮುಲ್ಲಾ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಪೊಲೀಸರು ಮಹತ್ವದ ಸುಳಿವು ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯುವತಿಯನ್ನು ಮದುವೆಯಾಗಬೇಕಿದ್ದ ಸಾಬೀರ್ ಮುಲ್ಲಾ ಎಂಬಾತನೇ ವೇಲ್‌ನಿಂದ ಕತ್ತು ಹಿಸುಕಿ ಝಕಿಯಾಗೆ ಕೊಲೆ ಮಾಡಿದ್ದಾನೆ ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಗಾಂಧಿ ಚೌಕ ನಿವಾಸಿಯಾಗಿದ್ದ ಝಕಿಯಾ ಮುಲ್ಲಾ ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದರು. ಜನವರಿ 20ರ ಸಂಜೆ ಲ್ಯಾಬ್‌ಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಅವರು ರಾತ್ರಿ ಮನೆಗೆ ಮರಳಿರಲಿಲ್ಲ. ಆದರೆ, ಮರುದಿನ ಬೆಳಿಗ್ಗೆ ಶಾಸಕ ವಿನಯ್ ಕುಲಕರ್ಣಿ ಡೈರಿ ಬಳಿ ಯುವತಿಯ ಶವ ಪತ್ತೆಯಾಗಿತ್ತು. ಆರಂಭದಲ್ಲಿ ಬೇರೆ ಸ್ಥಳದಲ್ಲಿ ಹತ್ಯೆ ನಡೆಸಿ ಇಲ್ಲಿ ಶವ ಎಸೆದಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು.

ತನಿಖೆಯ ವೇಳೆ ಆಘಾತಕಾರಿ ಸಂಗತಿ ಹೊರಬಿದ್ದಿದ್ದು, ಹತ್ಯೆ ನಡೆದ ಸ್ಥಳದಲ್ಲಿದ್ದ ಆರೋಪಿ ಸಾಬೀರ್ ಮುಲ್ಲಾನೇ ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕರೆ ಮಾಡಿ ಕೊಲೆಯ ಬಗ್ಗೆ ಮಾಹಿತಿ ನೀಡಿದ್ದನು. ಪೊಲೀಸರು ಸ್ಥಳಕ್ಕೆ ಆಗಮಿಸಿದಾಗಲೂ ಅಲ್ಲೇ ಇದ್ದು, ಏನೂ ಗೊತ್ತಿಲ್ಲದವನಂತೆ ವರ್ತಿಸಿದ್ದನು. ಆದರೆ ಆತನ ನಡವಳಿಕೆಯಿಂದ ಅನುಮಾನಗೊಂಡ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಹಿರಂಗವಾಗಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಝಕಿಯಾ ಮತ್ತು ಸಾಬೀರ್ ಸಂಬಂಧಿಕರಾಗಿದ್ದು, ಕುಟುಂಬಸ್ಥರು ಇವರ ಮದುವೆ ಕುರಿತು ಮಾತುಕತೆ ನಡೆಸಿದ್ದರು. ಜನವರಿ 20ರ ಸಂಜೆ ಇಬ್ಬರೂ ಹೊರಗೆ ಸುತ್ತಾಡಲು ತೆರಳಿದ್ದು, ಈ ವೇಳೆ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ವಾಗ್ವಾದ ನಡೆದಿದೆ. ಜಗಳ ಉಗ್ರ ರೂಪ ತಾಳುತ್ತಿದ್ದಂತೆ ಆಕ್ರೋಶಗೊಂಡ ಸಾಬೀರ್, ಝಕಿಯಾ ಧರಿಸಿದ್ದ ವೇಲ್‌ನಿಂದಲೇ ಆಕೆಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಸದ್ಯ ಆರೋಪಿ ಸಾಬೀರ್ ಮುಲ್ಲಾನನ್ನು ಬಂಧಿಸಿರುವ ಪೊಲೀಸರು, ಈ ಕೃತ್ಯದಲ್ಲಿ ಇನ್ನಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಶಂಕೆಯಲ್ಲಿ ಮತ್ತೊಬ್ಬ ಯುವಕನನ್ನು ವಿಚಾರಣೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.

ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ವಿದ್ಯಾಕಾಶಿಯಲ್ಲಿ ನಡೆದ ಈ ಭೀಕರ ಹತ್ಯೆ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ್ದು, ಮದುವೆಯಾಗಬೇಕಿದ್ದವನೇ ಯುವತಿಯ ಪ್ರಾಣ ತೆಗೆದಿರುವುದು ದುರಂತ ಹಾಗೂ ಆಘಾತಕಾರಿ ಘಟನೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

10 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

11 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

12 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

12 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

1 day ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

2 days ago