Shivamogga MLA Araga Jnanendra visits the family of a murdered Class 10 student, shares his personal loss, demands strict action against the accused, and calls for a special public prosecutor and police reforms.
ಶಿವಮೊಗ್ಗ: ಮಕ್ಕಳನ್ನು ಕಳೆದುಕೊಂಡ ಪೋಷಕರ ವೇದನೆ ಎಂಥದ್ದು ಎಂಬುದನ್ನು ನಾನು ವೈಯಕ್ತಿಕವಾಗಿ ಅನುಭವಿಸಿದ್ದೇನೆ. ನನ್ನ ಮಗಳಿಗೆ ಕೇವಲ 5 ವರ್ಷ ವಯಸ್ಸಾಗಿದ್ದಾಗ ಅಪಘಾತದಲ್ಲಿ ಆಕೆಯನ್ನು ಕಳೆದುಕೊಂಡ ನೋವು ನನಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ನಗರದ ಊರಗಡೂರಿನಲ್ಲಿ ಇತ್ತೀಚೆಗೆ ಹತ್ಯೆಗೀಡಾದ 10ನೇ ತರಗತಿ ವಿದ್ಯಾರ್ಥಿ ಸಂಕೇತ್ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು, ಮೃತ ವಿದ್ಯಾರ್ಥಿಯ ಪೋಷಕರಿಗೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಕ್ಕಳನ್ನು ಕಳೆದುಕೊಂಡಾಗ ಆಗುವ ನೋವು ಅಸಹನೀಯ. ಇಲ್ಲಿ ಎದೆ ಎತ್ತರಕ್ಕೆ ಬೆಳೆದ ಮಗನನ್ನು ಕಳೆದುಕೊಂಡು, ಅವನ ಭವಿಷ್ಯದ ಬಗ್ಗೆ ಕನಸು ಕಟ್ಟಿಕೊಂಡಿದ್ದ ಪೋಷಕರ ಕನಸು ಭಗ್ನಗೊಂಡಿದೆ” ಎಂದು ಹೇಳಿದರು.
ಈ ಪ್ರಕರಣದಲ್ಲಿ ಆರೋಪಿಗಳು ಅಪ್ರಾಪ್ತರಾಗಿದ್ದಾರೆ ಎಂಬ ಕಾರಣಕ್ಕೆ ಯಾವುದೇ ರಿಯಾಯಿತಿ ನೀಡಬಾರದು ಎಂದು ಆಗ್ರಹಿಸಿದ ಅವರು, ಸರ್ಕಾರ ತಕ್ಷಣವೇ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಿ ಕಾನೂನು ಹೋರಾಟ ನಡೆಸಬೇಕು ಎಂದರು.
ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿ ತುಂಬಾ ದೊಡ್ಡದಾಗಿರುವುದರಿಂದ ಹೊಸ ಪೊಲೀಸ್ ಠಾಣೆ ಸ್ಥಾಪನೆಯ ಅಗತ್ಯವಿದೆ ಎಂದು ಒತ್ತಾಯಿಸಿದರು. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ತುಷ್ಟೀಕರಣ ನೀತಿಗಳಿಂದಾಗಿ ಅಕ್ರಮ ದಂಧೆಗಳು ಹಾಗೂ ಗಾಂಜಾ ಹಾವಳಿ ಶಿವಮೊಗ್ಗದಲ್ಲಿ ಹೆಚ್ಚಾಗಿದೆ ಎಂದು ಆರೋಪಿಸಿದರು.
ಅಲ್ಪಸಂಖ್ಯಾತ ಪ್ರದೇಶಗಳಿಗೆ ಹೋಗಲು ಪೊಲೀಸರು ಹಿಂಜರಿಯುತ್ತಿದ್ದಾರೆ ಹಾಗೂ ಕೆಲವು ಪೊಲೀಸ್ ಸಿಬ್ಬಂದಿ ಅಕ್ರಮ ದಂಧೆಕೋರರೊಂದಿಗೆ ಶಾಮೀಲಾಗಿದ್ದಾರೆ ಎಂಬ ಆರೋಪ ಮಾಡಿದರು. ಇಂತಹ ಸಿಬ್ಬಂದಿಯನ್ನು ತಕ್ಷಣ ವರ್ಗಾವಣೆ ಮಾಡದಿದ್ದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಲಿದೆ ಎಂದು ಅವರು ಎಚ್ಚರಿಸಿದರು.
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…