ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ

Thirthahalli MLA Araga Jnanendra’s personal assistant, Rajesh Hirimane, has been remanded to judicial custody by a Hosanagara court for sharing a defamatory social media post against Rahul Gandhi. Read the full details of the case here.

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ

ಹೊಸನಗರ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಹೊಸನಗರ ಭಾಗದ ಆಪ್ತ ಸಹಾಯಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಲ್ಲಿನ ಜೆ.ಎಂ.ಎಫ್.ಸಿ (JMFC) ನ್ಯಾಯಾಲಯ ಆದೇಶ ಹೊರಡಿಸಿದೆ.

​ಮಳಲಿ ಗ್ರಾಮದ ನಿವಾಸಿ, ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಬಂಧಿತ ಆರೋಪಿಯಾಗಿದ್ದಾರೆ.

​ಘಟನೆಯ ವಿವರ:

ಆರೋಪಿ ರಾಜೇಶ್ ಹಿರಿಮನೆ, ರಾಹುಲ್ ಗಾಂಧಿಯವರ ಮುಖದ ಅರ್ಧ ಭಾಗ ಹಾಗೂ ಪಾಕಿಸ್ತಾನ ಸೇನೆಯ ಸಮವಸ್ತ್ರ ಧರಿಸಿದ ಅಧಿಕಾರಿ ‘ಅಸಿಮ್’ (ASIM) ಎಂಬುವರ ಫೋಟೋವನ್ನು ಎಡಿಟ್ ಮಾಡಿ ಸೇರಿಸಿದ್ದರು. ಈ ಚಿತ್ರಕ್ಕೆ “ONE AGENDA” ಎಂಬ ಟ್ಯಾಗ್ ಲೈನ್ ನೀಡಿ, ಫೇಸ್‌ಬುಕ್‌ನಲ್ಲಿ ಹರಿಬಿಡಲಾಗಿತ್ತು.


ಈ ಕೃತ್ಯದ ಕುರಿತಂತೆ ದಿನಾಂಕ 20/05/2025 ರಂದು ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ (BNS) ಕಾಯ್ದೆಯ ಸೆಕ್ಷನ್ 353(2) ರ ಅಡಿಯಲ್ಲಿ ಪೊಲೀಸರು ಸ್ವಯಂ ಪ್ರೇರಿತ (Suo Moto) ದೂರು ದಾಖಲಿಸಿಕೊಂಡಿದ್ದರು.

​ನ್ಯಾಯಾಂಗ ಬಂಧನ:

ಪ್ರಕರಣದ ವಿಚಾರಣೆ ನಡೆಸಿದ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು, ಆರೋಪಿ ರಾಜೇಶ್ ಹಿರಿಮನೆ ಅವರನ್ನು ದಿನಾಂಕ 24/02/2026 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ನೀಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

4 hours ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

16 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

17 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

17 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

19 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

22 hours ago