A tragic incident in Bhadravati where a woman died by suicide just five days after her husband’s suicide, raising questions over allegations and mental trauma. Police have registered a case and are investigating.
ಭದ್ರಾವತಿ: ಪತಿ ಆತ್ಮಹತ್ಯೆ ಮಾಡಿಕೊಂಡ ಐದೇ ದಿನಗಳೊಳಗೆ ಪತ್ನಿಯೂ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಭದ್ರಾವತಿ ನಗರದ ಹೊಸ ಸಿದ್ದಾಪುರ ಪ್ರದೇಶದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಸ್ವಾತಿ (26) ಎಂದು ಗುರುತಿಸಲಾಗಿದೆ. ಇವರ ಪತಿ ಜಗದೀಶ್ ಅವರು ಕೆಎಸ್ಐಎಫ್ಎಸ್ನಲ್ಲಿ ಡಿ ದರ್ಜೆ ನೌಕರರಾಗಿದ್ದರು. ಶಿವರಾತ್ರಿ ದಿನದಂದು ಜಗದೀಶ್ ಅವರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಅಸ್ವಭಾವಿಕ ಸಾವು ಪ್ರಕರಣ ದಾಖಲಾಗಿತ್ತು.
ಪತಿ ಸಾವಿನ ಆಘಾತದಿಂದ ಹೊರಬರಲಾಗದೆ ಇದ್ದ ಸ್ವಾತಿ, ಒಂದು ವಾರದೊಳಗೆ ತಾನೂ ಸಹ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಹೊಸ ತಿರುವು ನೀಡಿರುವುದು ಸ್ವಾತಿ ಅವರು ಆತ್ಮಹತ್ಯೆಗೆ ಮುನ್ನ ತಮ್ಮ ತಾಯಿಗೆ ಕಳುಹಿಸಿದ್ದ ವಾಟ್ಸಪ್ ಸಂದೇಶವಾಗಿದೆ.
ಆ ಸಂದೇಶದಲ್ಲಿ, ಶಿವಮೊಗ್ಗ ಜಿಲ್ಲೆಯ ಮಾಳೂರು ಪೊಲೀಸ್ ಠಾಣೆಯಲ್ಲಿ ದಫೇದಾರ್ ಆಗಿರುವ ವ್ಯಕ್ತಿಯೊಬ್ಬರು, “ನಿನ್ನ ಪತಿಯ ಸಾವಿಗೆ ನೀನೇ ಕಾರಣ” ಎಂದು ಆರೋಪಿಸಿದ್ದರೆಂದು ಉಲ್ಲೇಖಿಸಲಾಗಿದೆ. ಈ ಆರೋಪದಿಂದ ತೀವ್ರವಾಗಿ ಮನನೊಂದುಕೊಂಡಿದ್ದ ಸ್ವಾತಿ ಈ ಅತಿದೊಡ್ಡ ಹೆಜ್ಜೆ ಇಟ್ಟಿರುವ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…