A tragic incident in Bhadravati where a woman died by suicide just five days after her husband’s suicide, raising questions over allegations and mental trauma. Police have registered a case and are investigating.
ಭದ್ರಾವತಿ: ಪತಿ ಆತ್ಮಹತ್ಯೆ ಮಾಡಿಕೊಂಡ ಐದೇ ದಿನಗಳೊಳಗೆ ಪತ್ನಿಯೂ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಭದ್ರಾವತಿ ನಗರದ ಹೊಸ ಸಿದ್ದಾಪುರ ಪ್ರದೇಶದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಸ್ವಾತಿ (26) ಎಂದು ಗುರುತಿಸಲಾಗಿದೆ. ಇವರ ಪತಿ ಜಗದೀಶ್ ಅವರು ಕೆಎಸ್ಐಎಫ್ಎಸ್ನಲ್ಲಿ ಡಿ ದರ್ಜೆ ನೌಕರರಾಗಿದ್ದರು. ಶಿವರಾತ್ರಿ ದಿನದಂದು ಜಗದೀಶ್ ಅವರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಅಸ್ವಭಾವಿಕ ಸಾವು ಪ್ರಕರಣ ದಾಖಲಾಗಿತ್ತು.
ಪತಿ ಸಾವಿನ ಆಘಾತದಿಂದ ಹೊರಬರಲಾಗದೆ ಇದ್ದ ಸ್ವಾತಿ, ಒಂದು ವಾರದೊಳಗೆ ತಾನೂ ಸಹ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಹೊಸ ತಿರುವು ನೀಡಿರುವುದು ಸ್ವಾತಿ ಅವರು ಆತ್ಮಹತ್ಯೆಗೆ ಮುನ್ನ ತಮ್ಮ ತಾಯಿಗೆ ಕಳುಹಿಸಿದ್ದ ವಾಟ್ಸಪ್ ಸಂದೇಶವಾಗಿದೆ.
ಆ ಸಂದೇಶದಲ್ಲಿ, ಶಿವಮೊಗ್ಗ ಜಿಲ್ಲೆಯ ಮಾಳೂರು ಪೊಲೀಸ್ ಠಾಣೆಯಲ್ಲಿ ದಫೇದಾರ್ ಆಗಿರುವ ವ್ಯಕ್ತಿಯೊಬ್ಬರು, “ನಿನ್ನ ಪತಿಯ ಸಾವಿಗೆ ನೀನೇ ಕಾರಣ” ಎಂದು ಆರೋಪಿಸಿದ್ದರೆಂದು ಉಲ್ಲೇಖಿಸಲಾಗಿದೆ. ಈ ಆರೋಪದಿಂದ ತೀವ್ರವಾಗಿ ಮನನೊಂದುಕೊಂಡಿದ್ದ ಸ್ವಾತಿ ಈ ಅತಿದೊಡ್ಡ ಹೆಜ್ಜೆ ಇಟ್ಟಿರುವ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…