ಅರಣ್ಯ ಇಲಾಖೆಯ ತೆರವು ನೋಟಿಸ್‌ಗೆ ತಿರುಗೇಟು: ಎಡಮನೆ ರೈತರ ಪರ ಹರತಾಳು ಹಾಲಪ್ಪ ಸ್ಪಷ್ಟ ಘೋಷಣೆ

Former Karnataka minister ಹರತಾಳು ಹಾಲಪ್ಪ visits Edamane village in Sagar taluk, slams Forest Department eviction notices, and assures protection to 16 families living on ancestral land.


ಅರಣ್ಯ ಇಲಾಖೆಯ ತೆರವು ನೋಟಿಸ್‌ಗೆ ತಿರುಗೇಟು: ಎಡಮನೆ ರೈತರ ಪರ ಹರತಾಳು ಹಾಲಪ್ಪ ಸ್ಪಷ್ಟ ಘೋಷಣೆ

ಸಾಗರ ತಾಲೂಕಿನ ಕರೂರು ಹೋಬಳಿ ವ್ಯಾಪ್ತಿಯ ಚನ್ನಗೊಂಡ ಗ್ರಾಮ ಪಂಚಾಯಿತಿಯ ಕಟ್ಟಿನಕಾರು ಸಮೀಪದ ಎಡಮನೆ ಪ್ರದೇಶದ ಕುಟುಂಬಗಳಿಗೆ ಅರಣ್ಯ ಇಲಾಖೆ ತೆರವು ನೋಟಿಸ್‌ ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿದರು.

ಈ ವೇಳೆ ಗ್ರಾಮಸ್ಥರಿಗೆ ಧೈರ್ಯ ತುಂಬಿದ ಅವರು, ಶರಾವತಿ ಸಂತ್ರಸ್ತರಾದ ಎಡಮನೆ ಗ್ರಾಮದ ಉಳುವವನೇ ಹೊಲದ 16 ಕುಟುಂಬಗಳು ತಲೆತಲಾಂತರದಿಂದಲೇ ಈ ಪ್ರದೇಶದಲ್ಲಿ ಬದುಕು ಕಟ್ಟಿಕೊಂಡು ಬಂದಿರುವುದಾಗಿ ಹೇಳಿದರು. “ಇವರು ಒಡೆಯರಾಗಿದ್ದು, ಯಾವುದೇ ಕಾರಣಕ್ಕೂ ಇಲ್ಲಿನ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಭತ್ತ, ಅಡಕೆ ಹಾಗೂ ತೆಂಗು ಬೆಳೆಸಿಕೊಂಡು ಜೀವನ ನಡೆಸುತ್ತಿರುವ ರೈತರನ್ನು ಕೇವಲ ದಾಖಲೆಗಳಲ್ಲಿ ಕಾನೂನು ತೊಡಕು ಇದೆ ಎಂಬ ಕಾರಣ ನೀಡಿ ತೆರವುಗೊಳಿಸುವುದು ಸರಿಯಲ್ಲ ಎಂದು ಅವರು ಆಕ್ಷೇಪಿಸಿದರು. ಈ ವಿಚಾರವನ್ನು ಪಕ್ಷದ ಮಟ್ಟದಲ್ಲಿ ರಾಜ್ಯಮಟ್ಟದ ಹೋರಾಟವಾಗಿ ತೆಗೆದುಕೊಂಡು ಹೋಗುವುದಾಗಿ ತಿಳಿಸಿದರು.

2013ರ ಜನವರಿ 5ರಂದು ಕೋರ್ಟ್ ಆದೇಶ ಬಂದಿರುವುದನ್ನು ಉಲ್ಲೇಖಿಸಿದ ಹಾಲಪ್ಪ, “ಆ ಸಮಯದಲ್ಲಿ ಅಧಿಕಾರದಲ್ಲಿದ್ದವರು ಯಾರು? ಇಷ್ಟು ವರ್ಷಗಳ ಕಾಲ ಅಧಿಕಾರಿಗಳು ಏನು ಮಾಡುತ್ತಿದ್ದರು?” ಎಂದು ಪ್ರಶ್ನಿಸಿದರು. ಈ ಸಮಸ್ಯೆಗೆ ನೇರವಾಗಿ ರಾಜ್ಯ ಸರ್ಕಾರ, ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೇ ಹೊಣೆಗಾರರು ಎಂದು ದೂರಿದರು.

ಈ ಸಂದರ್ಭದಲ್ಲಿ ದೇವೇಂದ್ರಪ್ಪ ಯಲಕುಂಡ್ಲಿ, ತಾಪಂ ಮಾಜಿ ಅಧ್ಯಕ್ಷ ಬಿ.ಸಿ. ಲಕ್ಷ್ಮೀನಾರಾಯಣ ಭಟ್, ಪಂಚಾಯಿತಿ ಸದಸ್ಯರಾದ ನಾಗರಾಜ್ ವಾಟೆಮಕ್ಕಿ, ರಾಜೇಶ್ ಯಲಕೋಡ ಸೇರಿದಂತೆ ಹಲವರು ರೈತರನ್ನು ಭೇಟಿ ಮಾಡಿ ಬೆಂಬಲ ವ್ಯಕ್ತಪಡಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

2 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

8 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago