ಹೊಸನಗರಕ್ಕೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಅವಶ್ಯ |ಹೋರಾಟದ ಪೂರ್ವಭಾವಿ ಸಭೆಯಲ್ಲಿ ಒಕ್ಕೊರಲ ಧ್ವನಿ

Demand for restoration of Hosanagar Assembly Constituency gains momentum as religious leaders, former ministers, MLAs and citizens unanimously call for a separate constituency to address submergence-affected issues and ensure development.

ಹೊಸನಗರ: ಮುಳುಗಡೆ ಸಂತ್ರಸ್ಥರಾದ ಹೊಸನಗರ ತಾಲೂಕಿನ ಜನರ ಸಂಕಷ್ಟಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರತ್ಯೇಕ ವಿಧಾನಸಭಾ ಕ್ಷೇತ್ರ ರಚನೆಯೇ ಏಕೈಕ ಮಾರ್ಗ ಎಂದು ಮೂಲೆಗದ್ದೆ ಮಠದ ಅಭಿನವಚನ್ನಬಸವ ಸ್ವಾಮೀಜಿ ಹೇಳಿದರು.

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗಾಗಿ ನಡೆಸಲಾಗುವ ಹೋರಾಟದ ಕುರಿತು ಚರ್ಚಿಸಲು ಗುರುವಾರ ಗಾಯಿತ್ರಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕ್ಷೇತ್ರ ರಚನೆಯಾದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಗಲಿದೆ ಎಂದರು. ಈ ಹೋರಾಟ ಯಶಸ್ವಿಯಾಗಲು ಪ್ರತಿಯೊಬ್ಬರೂ ನಿಸ್ವಾರ್ಥವಾಗಿ ತೊಡಗಿಸಿಕೊಳ್ಳಬೇಕು. ಅಧಿಕಾರಿಗಳ ಗಮನ ಸೆಳೆಯುವಂತೆ ಹೋರಾಟ ಗಟ್ಟಿಯಾಗಬೇಕಿದ್ದು, ಯುವಜನತೆ, ಸಾರ್ವಜನಿಕ ವಲಯದಲ್ಲಿ ಗುರುತಿಸಿಕೊಂಡವರು, ಸಮಾಜಸೇವಕರು ಹಾಗೂ ಪ್ರಮುಖರು ಪಕ್ಷಾತೀತವಾಗಿ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಮಾಜಿ ಸಚಿವ ಕಿಮ್ಮನೆ ರತ್ನಾಕರ ಮಾತನಾಡಿ, ಪ್ರಸ್ತುತ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ಸುಮಾರು 400 ಕಿ.ಮೀ ವ್ಯಾಪ್ತಿಯನ್ನು ಹೊಂದಿದ್ದು, ಕ್ಷೇತ್ರ ಪ್ರವಾಸವೇ ದುಸ್ತರವಾಗಿದೆ ಎಂದರು. ಭೌಗೋಳಿಕತೆ ಆಧಾರದ ಮೇಲೆ ಮೇಘಾಲಯ, ಅಸ್ಸಾಂ ಮೊದಲಾದ ರಾಜ್ಯಗಳಲ್ಲಿ ಕಡಿಮೆ ಜನಸಂಖ್ಯೆ ಇದ್ದರೂ ವಿಶೇಷ ಸಂದರ್ಭಗಳಲ್ಲಿ ವಿಧಾನಸಭಾ ಕ್ಷೇತ್ರ ರಚಿಸಿರುವ ಉದಾಹರಣೆಗಳಿವೆ. ಮುಳುಗಡೆ ಸಮಸ್ಯೆಯಿಂದ ಬಳಲುತ್ತಿರುವ ಹೊಸನಗರ ತಾಲೂಕಿಗೂ ಇದೇ ರೀತಿಯ ನ್ಯಾಯ ದೊರಕಬೇಕಿದ್ದು, ಕ್ಷೇತ್ರ ಪುನರ್‌ರಚನೆಗೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದ್ದು ಈ ಬಗ್ಗೆ ನಾನು ಹಾಗೂ ಆರಗ ಜ್ಞಾನೇಂದ್ರ ವಿಧಾನಸಭೆಯಲ್ಲಿ ಸದನದ ಗಮನಸೆಳೆಯುವಲ್ಲಿ ಪ್ರಯತ್ನಿಸುತ್ತೇವೆ ಎಂದರು.

ಮಾಜಿ ಶಾಸಕ ಹರತಾಳು ಹಾಲಪ್ಪ ಮಾತನಾಡಿ, ಹೋರಾಟ ಆರಂಭಿಸುವುದಕ್ಕಿಂತ ಅದನ್ನು ನಿರಂತರವಾಗಿ ಮುಂದುವರೆಸಿಕೊಂಡು ಹೋಗುವುದು ಮುಖ್ಯ ಎಂದು ಹೇಳಿದರು. ಇಂದು ಸಭೆ ನಡೆಸಿ ಬಳಿಕ ಎರಡು ವರ್ಷಗಳ ಬಳಿಕ ಮತ್ತೆ ಹೋರಾಟಕ್ಕೆ ಇಳಿದರೆ ಯಾವುದೇ ಪ್ರಯೋಜನವಿಲ್ಲ. ಈಗ ಆರಂಭಿಸಿರುವ ಹೋರಾಟವನ್ನು ಹೀಗೆಯೇ ಮುಂದುವರೆಸಲು ತನ್ನ ಸಂಪೂರ್ಣ ಬೆಂಬಲವಿದೆ ಎಂದರು.

ಈ ಸಂಧರ್ಭದಲ್ಲಿ ಶಾಸಕ ಆರಗ ಜ್ಞಾನೇಂದ್ರ , ಮಾಜಿ ಶಾಸಕರಾದ ಬಿ. ಸ್ವಾಮಿರಾವ್, ಡಾ. ಜಿ.ಡಿ. ನಾರಾಯಣಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಅವರುಗಳು ವಿಧಾನಸಭಾ ಕ್ಷೇತ್ರ ರಚನೆಯ ಅಗತ್ಯ ಮತ್ತು ಮಹತ್ವದ ಕುರಿತು ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಚಂದ್ರಪ್ಪ, ಪ್ರಮುಖರಾದ ಎನ್.ಆರ್. ದೇವಾನಂದ, ವರ್ತೇಶ್, ಬಿ.ಜಿ. ಚಂದ್ರಮೌಳಿ, ತಿ.ನಾ. ಶ್ರೀನಿವಾಸ್, ಚಿದಂಬರ, ಶ್ರೀಧರ್ ಉಡುಪ, ಶ್ರೀನಿವಾಸ್ ಕಾಮತ್ ಸೇರಿದಂತೆ ವಿವಿಧ ಸಂಘ–ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಾಮಾಜಿಕ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಬಿ. ಚಿದಂಬರ್ ಸ್ವಾಗತಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…

7 hours ago

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…

11 hours ago

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…

13 hours ago

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…

15 hours ago

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…

16 hours ago

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…

2 days ago