ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಹೊಸನಗರದಲ್ಲಿ ಮಹತ್ವದ ಹೆಜ್ಜೆ | ಮೂಲೆಗದ್ದೆ ಶ್ರೀಗಳ ಸಮ್ಮುಖದಲ್ಲಿ ನಾಳೆ ಪೂರ್ವಭಾವಿ ಸಭೆ


ಹೊಸನಗರ: 2008ರ ಕ್ಷೇತ್ರ ಮರುವಿಂಗಡಣೆಯಲ್ಲಿ ಹೊಸನಗರ ತನ್ನದೇ ಆದ ವಿಧಾನಸಭಾ ಕ್ಷೇತ್ರದ ಅಸ್ತಿತ್ವವನ್ನು ಕಳೆದುಕೊಂಡ ನಂತರ ತಾಲೂಕಿನಲ್ಲಿ ಸಮಗ್ರ ಅಭಿವೃದ್ಧಿ ಕುಂಠಿತಗೊಂಡಿದೆ ಎಂಬ ಆಕ್ರೋಶದ ಹಿನ್ನೆಲೆಯಲ್ಲಿ, ಕ್ಷೇತ್ರ ಮರುಸ್ಥಾಪನೆಗಾಗಿ ಇಂದು (ಫೆಬ್ರವರಿ 12) ಪಟ್ಟಣದ ಶ್ರೀ ಗಾಯತ್ರಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.

ಬೆಳಗ್ಗೆ 10.30ಕ್ಕೆ ಆರಂಭವಾಗುವ ಈ ಸಭೆಯನ್ನು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳ ಸಾರಥ್ಯದಲ್ಲಿ ಪಕ್ಷಾತೀತ, ಧರ್ಮತೀತ ಹಾಗೂ ಜಾತ್ಯಾತೀತವಾಗಿ ಹಮ್ಮಿಕೊಳ್ಳಲಾಗಿದೆ.
2028ರ ಜನಗಣತಿ ಸಂದರ್ಭದಲ್ಲಿ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಯಾಗಬೇಕು ಎಂಬ ಮುಖ್ಯ ಉದ್ದೇಶದೊಂದಿಗೆ ಈ ಸಭೆ ಆಯೋಜಿಸಲಾಗಿದೆ.

ಬುಧವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಕೃಷಿ ಉತ್ಪಾದನಾ ಸಂಘದ ಅಧ್ಯಕ್ಷ ಎನ್.ಆರ್. ದೇವಾನಂದ್, 2008ರ ಮರುವಿಂಗಡಣೆಯಲ್ಲಿ ಹೊಸನಗರ ತಾಲೂಕಿನ ಹೋಬಳಿಗಳನ್ನು ಸಾಗರ ಹಾಗೂ ತೀರ್ಥಹಳ್ಳಿ ಕ್ಷೇತ್ರಗಳಿಗೆ ಹಂಚಲಾಗಿದ್ದು, ಅಂದಿನಿಂದ ತಾಲೂಕಿನ ಅಭಿವೃದ್ಧಿ ಮರೀಚಿಕೆಯಾಗಿ ಉಳಿದಿದೆ ಎಂದರು. ಪಶ್ಚಿಮ ಘಟ್ಟ ಪ್ರದೇಶವಾಗಿರುವ ಕಾರಣ ಜನಸಂಖ್ಯೆ ಹೆಚ್ಚಳ ಕಡಿಮೆಯಿರಬಹುದು, ಆದರೆ ಇದು ಕ್ಷೇತ್ರ ಮಾನ್ಯತೆ ಕಳೆದುಕೊಳ್ಳಲು ಕಾರಣವಾಗಬಾರದು ಎಂದು ಅಭಿಪ್ರಾಯಪಟ್ಟರು.

ಕ್ಷೇತ್ರ ಮರುಸ್ಥಾಪನೆಗಾಗಿ ಶೀಘ್ರದಲ್ಲೇ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ ಅವರು, ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳ ನೇತೃತ್ವದಲ್ಲಿ ಹೊಸನಗರ ಪಟ್ಟಣದ ಕೇಂದ್ರ ಸ್ಥಾನದಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಜಾಗೃತಿ ಜಾಥಾ ನಡೆಸುವ ಸದುದ್ದೇಶವಿದೆ ಎಂದರು.

ಈ ಹೋರಾಟಕ್ಕೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಇದಕ್ಕೂ ಮೊದಲು ಹೊಸನಗರ ಕ್ಷೇತ್ರದ ಮಾಜಿ ಶಾಸಕ, 95 ವರ್ಷದ ಬಿ. ಸ್ವಾಮಿರಾವ್ ಅವರು ಕ್ಷೇತ್ರ ಮರುಸ್ಥಾಪನೆಗಾಗಿ ಹಲವಾರು ಬಾರಿ ಧ್ವನಿ ಎತ್ತಿದ್ದರು. ಇತ್ತೀಚೆಗೆ ಮೂಡುಗೊಪ್ಪ ನಗರ ಪಂಚಾಯತಿ ಸದಸ್ಯ ಕರುಣಾಕರ ಶೆಟ್ಟಿ ತಾಲೂಕಿನ 30 ಗ್ರಾಮ ಪಂಚಾಯತಿಗಳಿಗೆ ಸೈಕಲ್ ಜಾಥಾ ಮೂಲಕ ಭೇಟಿ ನೀಡಿ ಜಾಗೃತಿ ಮೂಡಿಸಿದ್ದರು.

ಈ ಹಿನ್ನಲೆಯಲ್ಲಿ ಇಂದು ನಡೆಯುವ ಪೂರ್ವಭಾವಿ ಸಭೆಗೆ ತಾಲೂಕಿನ ಎಲ್ಲಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯತಿಗಳ ಮಾಜಿ ಜನಪ್ರತಿನಿಧಿಗಳು, ರೈತ ಸಂಘಟನೆಗಳು, ದಲಿತ ಸಮಿತಿಗಳು, ಹೋರಾಟಗಾರರು, ಮಹಿಳಾ ಸಂಘಗಳು, ಕಾಲೇಜು ಮಟ್ಟದ ವಿದ್ಯಾರ್ಥಿಗಳು ಸೇರಿದಂತೆ ಸಮಸ್ತ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯ ಹಾಗೂ ಅನಿಸಿಕೆಗಳನ್ನು ಹಂಚಿಕೊಳ್ಳುವಂತೆ ದೇವಾನಂದ್ ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಕಲಗೋಡು ರತ್ನಾಕರ್, ಗಣಪತಿ ಬೆಳಗೋಡು, ಮೊಬೈಲ್ ಮುರಳಿ, ಸದಾಶಿವ ಶೆಟ್ಟಿ, ಚಿದಂಬರ ಹೂವಿನಕೋಣೆ, ಚಿಕ್ಕಮಣತಿ ಅವಿನಾಶ್, ಮುಂಬಾರು ಶೇಖರಪ್ಪ, ಎಂ.ಪಿ. ಸುರೇಶ್, ಜಯನಗರ ಗುರು, ಉಬೇದ್ ಸಾಬ್, ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

3 hours ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

15 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

16 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

16 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

18 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

21 hours ago