ಅಂತರ್‌ರಾಜ್ಯ ಸರಗಳ್ಳರ ಜಾಲ ಪತ್ತೆ: ಮಾಂಗಲ್ಯ ಸರ ಕಳ್ಳತನ ಪ್ರಕರಣ ಭೇದಿಸಿ ನಾಲ್ವರ ಬಂಧನ

Shivamogga police busted an inter-state chain snatching gang and arrested four accused, recovering gold ornaments worth Rs 25 lakh and a bike used in the crime.

ಅಂತರ್‌ರಾಜ್ಯ ಸರಗಳ್ಳರ ಜಾಲ ಪತ್ತೆ: ಮಾಂಗಲ್ಯ ಸರ ಕಳ್ಳತನ ಪ್ರಕರಣ ಭೇದಿಸಿ ನಾಲ್ವರ ಬಂಧನ

ಶಿವಮೊಗ್ಗ: ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ ವಿನೋಬನಗರ ಪೊಲೀಸರು, ಬಂಧಿತರು ಅಂತರ್‌ರಾಜ್ಯ ಮಟ್ಟದಲ್ಲಿ ಸರಗಳ್ಳತನ ಹಾಗೂ ಒಂಟಿ ಮನೆ ದರೋಡೆಗಳಲ್ಲಿ ತೊಡಗಿದ್ದವರು ಎಂಬುದನ್ನು ಬಹಿರಂಗಪಡಿಸಿದ್ದಾರೆ.

ಕಳೆದ ನವೆಂಬರ್ 18ರಂದು ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ 60 ಅಡಿ ರಸ್ತೆಯ 16ನೇ ಕ್ರಾಸ್‌ನಲ್ಲಿ ಮಹಿಳೆ ನಡೆದುಕೊಂಡು ಹೋಗುತ್ತಿದ್ದ ವೇಳೆ, ಅಪರಿಚಿತನೊಬ್ಬ ಹಿಂಬದಿಯಿಂದ ಬಂದು ಕೊರಳಲ್ಲಿದ್ದ ಬಂಗಾರದ ಮಾಂಗಲ್ಯ ಸರವನ್ನು ಕಿತ್ತುಕೊಂಡು, ಕಾಯುತ್ತಿದ್ದ ಮತ್ತೊಬ್ಬನ ಬೈಕ್‌ನಲ್ಲಿ ಪರಾರಿಯಾಗಿದ್ದನು. ಈ ಪ್ರಕರಣವನ್ನು ಭೇದಿಸಿದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರನ್ನು ಕೊಯಮತ್ತೂರಿನ ಅರಸು ಅಲಿಯಾಸ್ ವಲ್ಲರಸು ಆರ್ (25), ಬೆಂಗಳೂರಿನ ಪಾದರಾಯಪುರ ಗುಡ್ಡದಹಳ್ಳಿಯ ಕಾಲು ಅಲಿಯಾಸ್ ಇಬ್ರಾಹಿಂ ಪಾಶಾ (ಇಬ್ರಾಹಿಂ ಬಾಶಾ), ಸೇಲಂನ ಕೇಶವನ್ (43) ಹಾಗೂ ತಮಿಳುನಾಡಿನ ಹೊಸೂರು ಮೂಲದ ಚಾಲಕ, ಹಾಲಿ ಅತ್ತಿಬೆಲೆಯ ನಿವಾಸಿ ಸತೀಶ್‌ಕುಮಾರ್ (40) ಎಂದು ಗುರುತಿಸಲಾಗಿದೆ.

ವಲ್ಲರಸು ಮತ್ತು ಇಬ್ರಾಹಿಂ ಪಾಶಾ ಬಳಿ ವಿನೋಬನಗರ ಠಾಣೆ ಪ್ರಕರಣಕ್ಕೆ ಸಂಬಂಧಿಸಿದ 40 ಗ್ರಾಂ ತೂಕದ ಗಟ್ಟಿ ಬಂಗಾರ (ಅಂದಾಜು ಮೌಲ್ಯ ರೂ.4.80 ಲಕ್ಷ) ಹಾಗೂ ಕೃತ್ಯಕ್ಕೆ ಬಳಸಿದ್ದ ಟಿಎನ್-90 ಎಲ್-6618 ನೊಂದಣಿ ಸಂಖ್ಯೆಯ ಬಜಾಜ್ ಪಲ್ಸರ್ ಎನ್-250 ಬೈಕ್ (ಮೌಲ್ಯ ರೂ.1.50 ಲಕ್ಷ) ವಶಪಡಿಸಿಕೊಳ್ಳಲಾಗಿದೆ.

ಮೂರನೇ ಆರೋಪಿ ಕೇಶವನ್ ಬಳಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಠಾಣೆ ಪ್ರಕರಣಕ್ಕೆ ಸಂಬಂಧಿಸಿದ 70 ಗ್ರಾಂ ತೂಕದ ಮಾಂಗಲ್ಯ ಸರ (ಮೌಲ್ಯ ರೂ.8.50 ಲಕ್ಷ) ಹಾಗೂ ವಿನೋಬನಗರ ಠಾಣೆ ಪ್ರಕರಣಕ್ಕೆ ಸಂಬಂಧಿಸಿದ 60 ಗ್ರಾಂ ತೂಕದ ಬಂಗಾರದ ಆಭರಣಗಳು (ಮೌಲ್ಯ ರೂ.10.20 ಲಕ್ಷ) ಪತ್ತೆಯಾಗಿವೆ. ಒಟ್ಟು ವಶಪಡಿಸಿದ ಚಿನ್ನಾಭರಣಗಳ ಅಂದಾಜು ಮೌಲ್ಯ ಸುಮಾರು ರೂ.25 ಲಕ್ಷವಾಗಿದೆ.

ಈ ಪತ್ತೆ ಕಾರ್ಯದಲ್ಲಿ ಡಿವೈಎಸ್‌ಪಿ ಸಂಜೀವಕುಮಾರ್, ಸಿಪಿಐ ಸಂತೋಷ್‌ಕುಮಾರ್, ಎಸ್‌ಐ ತಿರುಮಲೇಶ್ ಹಾಗೂ ಸಿಬ್ಬಂದಿಗಳು ಶ್ರಮವಹಿಸಿದ್ದು, ಯಶಸ್ವಿ ಕಾರ್ಯಾಚರಣೆಗೆ ಪೊಲೀಸ್ ಅಧೀಕ್ಷಕ ನಿಖಿಲ್ ಅವರು ತಂಡವನ್ನು ಶ್ಲಾಘಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

3 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

4 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

8 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

12 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

14 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago