ಕಮಲಾಕರ ಭಟ್ಟನಿಗೆ ಹೊಸ ಸಂಕಷ್ಟ: ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಆರೋಪ | ಪೋಕ್ಸೋ ಪ್ರಕರಣ ದಾಖಲು

Astrologer Kamalakar Bhatt, already jailed in the Vasanth Naik murder case, has now been booked under the POCSO Act in Shivamogga for alleged sexual assault on a minor, deepening his legal troubles.

ಕಮಲಾಕರ ಭಟ್ಟನಿಗೆ ಹೊಸ ಸಂಕಷ್ಟ: ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಆರೋಪ | ಪೋಕ್ಸೋ ಪ್ರಕರಣ ದಾಖಲು

ಶಿವಮೊಗ್ಗ: ಸಿದ್ದಾಪುರ ತಾಲೂಕು ಅವರಗುಪ್ಪಾದ ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಜ್ಯೋತಿಷಿ ಕಮಲಾಕರ ಭಟ್ಟನ ವಿರುದ್ಧ ಇದೀಗ ಮತ್ತೊಂದು ಗಂಭೀರ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ದೂರು ದಾಖಲಿಸಲಾಗಿದೆ.

ಈಗಾಗಲೇ ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಕಮಲಾಕರ ಭಟ್ಟನ ಸಹವರ್ತಿ ಸುಚಿತ್ರಾ ಸೇರಿದಂತೆ ಐವರು ಜೈಲು ವಾಸದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಕಮಲಾಕರ ಭಟ್ಟನ ವಿರುದ್ಧ ಮತ್ತೊಂದು ಕೇಸು ದಾಖಲಾಗಿರುವುದರಿಂದ, ಅವರ ಜೈಲಿನಿಂದ ಹೊರಬರುವ ಸಾಧ್ಯತೆ ಇನ್ನಷ್ಟು ದೂರವಾಗುವಂತೆ ಕಾಣುತ್ತಿದೆ.

ಪೊಲೀಸ್ ಮೂಲಗಳ ಪ್ರಕಾರ, ಅಪ್ರಾಪ್ತ ವಯಸ್ಸಿನ ಬಾಲಕಿಯ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಈ ದೂರು ದಾಖಲಾಗಿದೆ. ಇತ್ತ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೆಲ ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿ ಇದ್ದ ಕಮಲಾಕರ ಭಟ್ಟನನ್ನು ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ, ಕೊಲೆ ನಡೆದ ಸಮಯದಲ್ಲಿ ತಾನು ಸ್ಥಳದಲ್ಲಿರಲಿಲ್ಲ ಎಂದು ಹೇಳಿದ್ದ ಭಟ್ಟ, ತನ್ನ ಮೊಬೈಲ್ ಲೊಕೇಶನ್ ಪರಿಶೀಲಿಸುವಂತೆ ಪೊಲೀಸರಿಗೆ ಸವಾಲು ಹಾಕಿದ್ದರು.

ಪೊಲೀಸರು ಮೊಬೈಲ್ ಲೊಕೇಶನ್ ಪರಿಶೀಲಿಸಿದಾಗ, ಕೊಲೆ ನಡೆದ ಸಮಯದಲ್ಲಿ ಅವರು ಅವರಗುಪ್ಪದಲ್ಲಿ ಇರಲಿಲ್ಲ ಎಂಬುದು ಬೆಳಕಿಗೆ ಬಂದಿದ್ದು, ಅವರು ಸಿದ್ದಾಪುರ ತಾಲೂಕು ಪ್ರದೇಶದಲ್ಲಿದ್ದರು ಎನ್ನಲಾಗಿದೆ. ಇದರಿಂದ ಕೊಲೆ ಪ್ರಕರಣದಲ್ಲಿ ಜಾಮೀನು ಅಥವಾ ಬಿಡುಗಡೆಗೆ ನಿರೀಕ್ಷೆಯಲ್ಲಿದ್ದ ಕಮಲಾಕರ ಭಟ್ಟನಿಗೆ, ಇದೀಗ ದಾಖಲಾಗಿರುವ ಪೊಕ್ಸೊ ಕೇಸು ಮತ್ತಷ್ಟು ಸಂಕಷ್ಟ ತಂದೊಡ್ಡಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

14 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

16 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

16 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

17 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

17 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

2 days ago