Children’s Market event was successfully organized at Koduru Government Higher Primary School, where students showcased entrepreneurial skills by selling vegetables, snacks, and healthy drinks with support from parents and teachers.
ಕೋಡೂರು ಸರ್ಕಾರಿ ಶಾಲೆಯಲ್ಲಿ ‘ಮಕ್ಕಳ ಸಂತೆ’—ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನಕ್ಕೆ ಉತ್ತೇಜನ
ರಿಪ್ಪನ್ಪೇಟೆ : ಇಲ್ಲಿನ ಕೋಡೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಮಕ್ಕಳ ಸಂತೆ’ ಕಾರ್ಯಕ್ರಮವನ್ನು ಉತ್ಸಾಹಭರಿತವಾಗಿ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಪೋಷಕರ ಸಹಕಾರದೊಂದಿಗೆ ತರಕಾರಿ, ಹಸಿಮೊಳಕೆ ಕಟ್ಟಿದ ಕಾಳು, ಬಗೆಬಗೆಯ ತಾಜಾ ಸೊಪ್ಪುಗಳು ಹಾಗೂ ವಿವಿಧ ತಿಂಡಿಗಳ ಅಂಗಡಿಗಳನ್ನು ತೆರೆದು ಖರೀದಿ–ಮಾರಾಟದ ಅನುಭವವನ್ನು ಪಡೆದರು.
ವಿನೂತನ ಹೆಸರಿನ ಅಂಗಡಿಗಳೊಂದಿಗೆ ಆರೋಗ್ಯಕರ ಹಸಿರುಕಾಳಿನ ಪಾನೀಯ, ರಾಗಿ ಹಾಲು, ರುಚಿಕರ ಪಾನಿಪುರಿ, ಸಮೋಸ, ಫ್ರುಟ್ ಸಲಾಡ್, ಬಜ್ಜಿ, ಬೋಂಡಾ ಮೊದಲಾದವುಗಳ ಮಾರಾಟ ಗಮನಸೆಳೆಯಿತು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ತಂಪು ಕಬ್ಬಿನಹಾಲು, ಸೋಡಾ ಹಾಗೂ ಐಸ್ಕ್ರೀಮ್ ಸವಿಯಲು ವ್ಯವಸ್ಥೆ ಮಾಡಲಾಗಿತ್ತು.
ವೇದಿಕೆ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಂದ ವಸ್ತುಗಳ ಖರೀದಿಯ ಮೂಲಕ ಉದ್ಘಾಟಿಸಲಾಯಿತು. ಈ ಸಂಧರ್ಭದಲ್ಲಿ ಕೋಡೂರು ಗ್ರಾಮ ಪಂಚಾಯತಿಯ ನಿಕಟಪೂರ್ವ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರಾಜ್, SDMC ಅಧ್ಯಕ್ಷ ಕೃಷ್ಣಮೂರ್ತಿ ಉಪಸ್ಥಿತರಿದ್ದರು.
ಹೊಸನಗರ ಕ್ಷೇತ್ರಶಿಕ್ಷಣಾಧಿಕಾರಿ ಗಣೇಶ್ ವೈ ‘ಮಕ್ಕಳ ಸಂತೆ’ ವೀಕ್ಷಿಸಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನ ಮತ್ತು ಕೌಶಲ್ಯವನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಶ್ರಮಿಸಿದ ಶಾಲೆಯ ಶಿಕ್ಷಕವರ್ಗ ಹಾಗೂ SDMC ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಿ, ಶಿಕ್ಷಕಿಯರಾದ ನಾಗವೇಣಿ, ಅಂಬಿಕಾ, ರುಬಿನಾ ತಾಜ್, ಸುಧಾ, ಮಾನಸ, ರೂಪಾ ಹಾಗೂ ಕ್ಲಸ್ಟರ್ ಸಿಆರ್ಪಿ ಪ್ರದೀಪ್ ಉಪಸ್ಥಿತರಿದ್ದರು.
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…