A man allegedly attacked lodge staff in Shivamogga after being told not to shout, causing damage to property and attempting murder. A case has been registered at Jayanagar Police Station.
ಲಾಡ್ಜ್ನಲ್ಲಿ ಕೂಗಾಡಬೇಡಿ ಎಂದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಹಲ್ಲೆ: ಕೊಲೆಗೆತ್ನ ಆರೋಪ, ದೂರು ದಾಖಲು
ಶಿವಮೊಗ್ಗ: ನಗರದ ಪಾರ್ಕ್ ಬಡಾವಣೆಯಲ್ಲಿರುವ ಲಾಡ್ಜ್ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಕೊಲೆಗೆತ್ನಿಸಿದ ಘಟನೆ ನಡೆದಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೂರುದಾರರ ಪ್ರಕಾರ, ಫೆಬ್ರವರಿ 7ರ ಮಧ್ಯಾಹ್ನ ಲಾಡ್ಜ್ನಲ್ಲಿ ತಂಗಿದ್ದ ವ್ಯಕ್ತಿಯೊಬ್ಬ ಜೋರಾಗಿ ಕೂಗಾಡುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದನು. ಇದರಿಂದ ಇತರ ಗ್ರಾಹಕರಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿದ ಸಿಬ್ಬಂದಿಗಳು, ಶಾಂತವಾಗಿರಲು ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಆರೋಪಿ, ಮಧ್ಯಾಹ್ನ ವೇಳೆ ಸಿಬ್ಬಂದಿಗಳು ಊಟ ಮಾಡುತ್ತಿದ್ದ ಕೊಠಡಿಗೆ ನುಗ್ಗಿ, ಬಾಗಿಲನ್ನು ಕಾಲಿನಿಂದ ಒದ್ದು ಸಂಪೂರ್ಣವಾಗಿ ಹಾನಿಗೊಳಿಸಿದ್ದಾನೆ ಎನ್ನಲಾಗಿದೆ.
ಘಟನೆಯನ್ನು ತಡೆಯಲು ಮುಂದಾದ ಮಹಿಳಾ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, “ನನಗೆ ಬುದ್ಧಿವಾದ ಹೇಳಲು ನೀವ್ಯಾರು?” ಎಂದು ಬೆದರಿಕೆ ಹಾಕಿದ್ದಾನೆ. ಅಲ್ಲದೆ, ಮುರಿದು ಬಿದ್ದ ಬಾಗಿಲಿನ ಅಲ್ಯೂಮಿನಿಯಂ ಪಟ್ಟಿಯನ್ನು ಹಿಡಿದು ಸಿಬ್ಬಂದಿಗಳ ಮೇಲೆ ಮನಬಂದಂತೆ ದಾಳಿ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಇದನ್ನು ತಡೆಯಲು ಹೋದ ಮಹಿಳಾ ಸಿಬ್ಬಂದಿಯ ಬಟ್ಟೆಯನ್ನು ಹಿಡಿದು ಎಳೆದಾಡಿ, ಅವರನ್ನು ಜೋರಾಗಿ ತಳ್ಳಿ ಒಬ್ಬ ಸಿಬ್ಬಂದಿಯ ಮೇಲೆ ಕೊಲೆಗೆತ್ನ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಘಟನೆ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…
ಸಾಗರದಲ್ಲಿ ಬೋರ್ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…
ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…
ಚೆಸ್ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…
ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…