ಅಕ್ರಮ ಆಸ್ತಿ ಆರೋಪ: ಬೆಸ್ಕಾಂ ಎಇಇ ಮನೆ–ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ | ರಿಪ್ಪನ್‌ಪೇಟೆಯಲ್ಲೂ ಪರಿಶೀಲನೆ

Lokayukta officials conducted simultaneous raids on the houses, office and properties of BESCOM AEE R.H. Arjun in Davanagere and Shivamogga over allegations of disproportionate assets. Document verification is ongoing.

ಅಕ್ರಮ ಆಸ್ತಿ ಆರೋಪ: ಬೆಸ್ಕಾಂ ಎಇಇ ಮನೆ–ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ | ರಿಪ್ಪನ್‌ಪೇಟೆಯಲ್ಲೂ ಪರಿಶೀಲನೆ

ದಾವಣಗೆರೆ/ಶಿವಮೊಗ್ಗ: ಆದಾಯ ಮೀರಿದ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಬೆಸ್ಕಾಂ (BESCOM) ದಾವಣಗೆರೆ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಇಇ ಅರ್ಜುನ್‌ ಆರ್.ಎಚ್ ಅವರ ಮನೆ, ಕಚೇರಿ ಹಾಗೂ ಸಂಬಂಧಿತ ಆಸ್ತಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ (ಫೆ.12) ಬೆಳಂಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ದಾವಣಗೆರೆ ಮತ್ತು ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಐದು ತಂಡಗಳಾಗಿ ಕಾರ್ಯಾಚರಣೆ ನಡೆಸಿದ್ದು, ಶಿವಮೊಗ್ಗದ ಗೋಪಾಳದ ಮನೆ ಹಾಗೂ ವಾಣಿಜ್ಯ ಸಂಕೀರ್ಣ, ದಾವಣಗೆರೆಯ ನಿಟ್ಟುವಳ್ಳಿ ಬಡಾವಣೆಯ ಬಾಡಿಗೆ ರೂಂ ಮತ್ತು ಬೆಸ್ಕಾಂ ಕಚೇರಿ, ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದ ತೋಟದ ಮನೆ ಸೇರಿದಂತೆ ಹಲವು ಸ್ಥಳಗಳಲ್ಲಿ ಪರಿಶೀಲನೆ ನಡೆದಿದೆ. ಈ ಸಂಬಂಧ ಪಟ್ಟಣದ ಗ್ರಾಮ ಪಂಚಾಯತಿಗೂ ಅಧಿಕಾರಿಗಳು ಭೇಟಿ ನೀಡಿ ಕಛೇರಿಯನ್ನು ದಾಳಿ ಸಂಬಂಧಿತ ಕಾರ್ಯಕ್ಕೆ ಬಳಸಿದ ಬಗ್ಗೆಯೂ ವರದಿಯಾಗಿದೆ.

ತನಿಖೆಯ ಪ್ರಾಥಮಿಕ ಮಾಹಿತಿಯಂತೆ ಅರ್ಜುನ್‌ ಅವರ ಬಳಿ ಎರಡು ನಿವೇಶನಗಳು, ಮೂರು ಮನೆಗಳು ಹಾಗೂ ಇತ್ತೀಚೆಗೆ ಖರೀದಿಸಿದ ಸುಮಾರು ಎರಡು ಎಕರೆ ಕೃಷಿ ಭೂಮಿ ಪತ್ತೆಯಾಗಿದೆ. ಚಿನ್ನಾಭರಣವನ್ನು ಅಡವಿಟ್ಟು ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ಅಂಶವೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಶಿವಮೊಗ್ಗದ ಮನೆಯಲ್ಲಿ ಆಸ್ತಿ ಪತ್ರಗಳು ಸೇರಿದಂತೆ ಚಿನ್ನಾಭರಣ ಮತ್ತು ಬೆಳ್ಳಿ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದೇ ವೇಳೆ ವಿಜಯನಗರ ಮತ್ತು ಗೋಪಾಲಗೌಡ ಬಡಾವಣೆ, ಸಾಗರ ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದಲ್ಲಿರುವ 2.5 ಎಕರೆ ಹಾಗೂ 4.5 ಎಕರೆ ಜಮೀನಿನ ಫಾರ್ಮ್‌ಹೌಸ್‌ಗಳ ಮೇಲೂ ದಾಳಿ ಮುಂದುವರಿದಿದೆ. ದಾವಣಗೆರೆಯ ನಿಟ್ಟುವಳ್ಳಿಯ ಬಾಡಿಗೆ ಮನೆ ಮತ್ತು ಕಚೇರಿಯಲ್ಲಿಯೂ ದಾಖಲೆ ಪರಿಶೀಲನೆ ನಡೆಯುತ್ತಿದೆ.

“ಅರ್ಜುನ್‌ ಅವರ ಬಳಿ ನಿವೇಶನ, ಮನೆ ಹಾಗೂ ಜಮೀನು ಪತ್ತೆಯಾಗಿದೆ. ನಗದು ಮತ್ತು ಚಿನ್ನಾಭರಣ ಸಿಕ್ಕಿಲ್ಲ. ದಾಖಲೆಗಳ ಪರಿಶೀಲನೆ ಇನ್ನೂ ಪೂರ್ಣಗೊಂಡಿಲ್ಲ,” ಎಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಕೌಲಾಪುರೆ ಮಾಹಿತಿ ನೀಡಿದ್ದಾರೆ.

ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖರ್‌, ಇನ್ಸ್‌ಪೆಕ್ಟರ್‌ಗಳಾದ ಪ್ರಭು ಸೂರೇನ್‌ ಮತ್ತು ಗುರುರಾಜ್‌ ಮೈಲಾರಿ ನೇತೃತ್ವದ ತಂಡಗಳು ಪರಿಶೀಲನೆ ನಡೆಸುತ್ತಿವೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…

6 hours ago

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…

10 hours ago

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…

12 hours ago

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…

15 hours ago

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…

15 hours ago

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…

1 day ago