Large-scale development works worth over ₹8 crore are underway in Marutipura Gram Panchayat of Hosanagar taluk, with former GP president H.P. Chidambaram praising MLA Belur Gopalakrishna for fulfilling his promises and prioritizing basic infrastructure.
ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಿಂದೆಂದೂ ಕಾಣದಂತಹ ಅಭಿವೃದ್ಧಿಯ ಪರ್ವ ನಡೆಯುತ್ತಿದ್ದು, ವಿವಿಧ ಯೋಜನೆಗಳ ಮೂಲಕ ಸುಮಾರು 8 ಕೋಟಿ ರೂ.ಕ್ಕೂ ಅಧಿಕ ಮೊತ್ತದ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿದೆ ಎಂದು ಮಾರುತಿಪುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಹೊಸನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಪಿ. ಚಿದಂಬರಂ ಹೂವಿನಕೋಣೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, “ಮಾನ್ಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಹೊಸನಗರ ತಾಲೂಕಿನಲ್ಲಿ ಅತ್ಯಧಿಕ ಅನುದಾನವನ್ನು ಮಾರುತಿಪುರ ಗ್ರಾಮ ಪಂಚಾಯಿತಿಗೆ ವಿನಿಯೋಗಿಸಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಭರವಸೆಯನ್ನು ಕಾರ್ಯರೂಪಕ್ಕೆ ತಂದು ‘ನುಡಿದಂತೆ ನಡೆದಿದ್ದಾರೆ’,” ಎಂದು ಶ್ಲಾಘಿಸಿದರು.
ಕುಡಿಯುವ ನೀರು, ರಸ್ತೆ, ಕಾಲುಸಂಕ, ಚಾನಲ್ಗಳು, ಸೇತುವೆಗಳು ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಸರ್ಕಾರಿ ಶಾಲೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಸ್ಟೆಲ್, ಗ್ರಂಥಾಲಯ, ಅಂಗನವಾಡಿ ಹಾಗೂ ಬಸ್ ನಿಲ್ದಾಣಗಳ ನವೀಕರಣಕ್ಕೂ ವಿಶೇಷ ಒತ್ತು ನೀಡಲಾಗಿದೆ ಎಂದು ಚಿದಂಬರಂ ಹೇಳಿದರು.
“ಮಾರುತಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಸಾರ್ವಜನಿಕರಿಗೆ ನೇರ ಲಾಭ ನೀಡುತ್ತಿದ್ದು, ಕೆಲವು ಕಾಮಗಾರಿಗಳು ಪೂರ್ಣಗೊಂಡಿವೆ, ಕೆಲವು ಪ್ರಗತಿಯಲ್ಲಿವೆ, ಇನ್ನು ಕೆಲವು ಟೆಂಡರ್ ಪ್ರಕ್ರಿಯೆಯಲ್ಲಿವೆ. ಮುಂದಿನ ದಿನಗಳಲ್ಲೂ ಈ ಅಭಿವೃದ್ಧಿ ನಿರಂತರವಾಗಿ ಸಾಗಲು ಸಾರ್ವಜನಿಕರು ಶಾಸಕರ ಕೈಬಲಪಡಿಸಬೇಕು,” ಎಂದು ಅವರು ಮನವಿ ಮಾಡಿದ್ದಾರೆ.
ಶಾಸಕರ ಅವಧಿಯಲ್ಲಿ ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಮಗ್ರ ಅಭಿವೃದ್ಧಿ ಸಾಧ್ಯವಾಗಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂತಸ ವ್ಯಕ್ತವಾಗುತ್ತಿದೆ ಎಂದು ಚಿದಂಬರಂ ಹೇಳಿದರು.
ವಿಜಾಪುರ ಮುಖ್ಯ ರಸ್ತೆಯಿಂದ ಬೀಸಿನಕೊಪ್ಪ ರಸ್ತೆ ಡಾಂಬರೀಕರಣ – ₹15 ಲಕ್ಷ
ಮಾರುತಿಪುರ ಹಾಸ್ಟೆಲ್ ದುರಸ್ತಿ, ಆಸ್ಪತ್ರೆ ದುರಸ್ತಿ, ಶಾಲೆಗಳ ದುರಸ್ತಿ, ಗ್ರಂಥಾಲಯ ನವೀಕರಣ, ಪ್ರೌಢಶಾಲೆ ಹಾಗೂ ಮಜ್ವಾನ ಶಾಲೆಗೆ ಪ್ರಾರ್ಥನಾ ಮಂದಿರ, ಪ್ರೌಢಶಾಲೆ ಮುಂಭಾಗ ಬಸ್ ನಿಲ್ದಾಣ, ಅಂಗನವಾಡಿ ಕಟ್ಟಡ ನಿರ್ಮಾಣ, ಪುನೀತ್ ರಾಜಕುಮಾರ್ ಪ್ರತಿಮೆ ಬಳಿ ಹೈಮಾಸ್ಟ್ ದೀಪ ಸ್ಥಾಪನೆ ಸೇರಿದಂತೆ ಹಲವು ಕಾಮಗಾರಿಗಳು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…
ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…
ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…
ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…