Patla Satish Shetty’s Patla Foundation continues to support Yakshagana artists and students by providing free training, housing support, and financial aid, becoming a ray of hope for underprivileged folk artists in Hosanagara.
ದುರ್ಬಲ ಕಲಾವಿದರ ಬದುಕಿಗೆ ಬೆಳಕು ನೀಡುತ್ತಿರುವ ಪಟ್ಲ ಸತೀಶ್ ಶೆಟ್ಟಿ – ಶಾಸಕ ಬೇಳೂರು ಗೋಪಾಲಕೃಷ್ಣ
ಹೊಸನಗರ : ಇನ್ನೊಬ್ಬರಿಗೆ ಸಹಾಯ ಮಾಡುವುದರಿಂದ ಯಾರೂ ಬಡವರಾಗುವುದಿಲ್ಲ ಬದಲಾಗಿ ಅದು ಹೃದಯವನ್ನು ಶ್ರೀಮಂತಗೊಳಿಸುತ್ತದೆ. ಆ ಮಾತಿಗೆ ಜೀವಂತ ಉದಾಹರಣೆಯಾಗಿ ಪಟ್ಲ ಸತೀಶ್ ಶೆಟ್ಟಿ ಅವರು ಇಂದು ಕಾಣಿಸುತ್ತಿದ್ದಾರೆ. ದುರ್ಬಲ ಕಲಾವಿದರ ಬದುಕಿಗೆ ಆಸರೆಯಾಗುವ ಮೂಲಕ ಅವರ ಭವಿಷ್ಯಕ್ಕೆ ಹೊಸ ದಾರಿ ತೋರಿಸುತ್ತಿರುವ ಪಟ್ಲ ಸತೀಶ್ ಶೆಟ್ಟಿಯವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಶಾಸಕ ಗೋಪಾಲಕೃಷ್ಣ ಹೇಳಿದರು.
ಶನಿವಾರ ಹೊಸನಗರದ ಗಾಯತ್ರಿ ಮಂದಿರದಲ್ಲಿ ಪಟ್ಲ ಫೌಂಡೇಶನ್ ಆಶ್ರಯದಲ್ಲಿ ನಡೆದ ಯಕ್ಷಗಾನ ಪ್ರಸಂಗ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ವಿದ್ಯಾರ್ಥಿಗೂ ಯಕ್ಷಗಾನದ ಪರಿಚಯ ಇರಬೇಕು. ಕಲಾವಿದರಾಗದಿದ್ದರೂ ಉತ್ತಮ ಯಕ್ಷಗಾನ ಪ್ರೇಕ್ಷಕರಾಗಬೇಕು ಎಂಬ ಉದ್ದೇಶದಿಂದ ಪಟ್ಲ ಫೌಂಡೇಶನ್ ಕಳೆದ ಹತ್ತು ವರ್ಷಗಳಿಂದ ಯಕ್ಷಕಲಾವಿದರು ಮತ್ತು ಅವರ ಕುಟುಂಬಗಳಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ರಾಷ್ಟ್ರಮಟ್ಟದಲ್ಲಿ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಕಾರ್ಯವೂ ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ಹಾಗೂ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಮಾತನಾಡಿ ಯಕ್ಷಗಾನ ಕಲೆಯನ್ನು ದೇವರಂತೆ ಪೂಜಿಸುವವರು, ಕಲಾವಿದರನ್ನು ಪ್ರೀತಿಸುವ ಅಭಿಮಾನಿಗಳು ಮತ್ತು ದಾನಿಗಳು ನಮ್ಮ ನಡುವೆ ಹಲವರಿದ್ದಾರೆ. ಆದರೆ ಸ್ವತಃ ಒಬ್ಬ ಕಲಾವಿದನಾಗಿ ಬಡ ಮತ್ತು ಅಶಕ್ತ ಕಲಾವಿದರ ಬೆಂಬಲಕ್ಕೆ ನಿಂತವರು ವಿರಳ. ಆ ವಿರಳರಲ್ಲಿ ಪಟ್ಲ ಸತೀಶ್ ಶೆಟ್ಟಿಯವರು ಪ್ರಮುಖರು ಎಂದು ಹೇಳಿದರು.
ಅಂ. ರಾಮಶೇಟ್ ವೇದಿಕೆ ಹಾಗೂ ಶ್ರೀ ಗಣಪತಿ ದೇವಾಲಯದ ಮಾರ್ಕೋಡು ಸುಬ್ರುಯ ಆಚಾರ್ಯ ವೇದಿಕೆಗಳಲ್ಲಿ ಒಟ್ಟು 45 ಯಕ್ಷಗಾನ ಪ್ರಸಂಗಗಳು ಪ್ರದರ್ಶನಗೊಂಡವು.
ಈ ಸಂದರ್ಭದಲ್ಲಿ ಶಾಸಕರು, ಆರ್.ಎಂ. ಮಂಜುನಾಥ ಗೌಡರು, ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆ ಹಾಗೂ ವಿವಿಧ ಸಂಘ–ಸಂಸ್ಥೆಗಳ ವತಿಯಿಂದ ಪಟ್ಲ ಸತೀಶ್ ಶೆಟ್ಟಿಯವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಪಟ್ಲ ಫೌಂಡೇಶನ್ ಆಶ್ರಯದಲ್ಲಿ ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ 50ಕ್ಕೂ ಹೆಚ್ಚು ಶಾಲೆಗಳ 5,500 ವಿದ್ಯಾರ್ಥಿಗಳಿಗೆ ಉಚಿತ ಯಕ್ಷಶಿಕ್ಷಣ ನೀಡಲಾಗುತ್ತಿದೆ. ಮಕ್ಕಳ ಪ್ರತಿಭೆ ಪ್ರದರ್ಶನಕ್ಕೆ ಎರಡು ವೇದಿಕೆಗಳಲ್ಲಿ 30ಕ್ಕೂ ಹೆಚ್ಚು ಯಕ್ಷಗಾನ ಪ್ರದರ್ಶನಗಳು ನಡೆದವು. ಜೊತೆಗೆ ಹೊಸನಗರದ ಯಕ್ಷಗಾನ ಕಲಾವಿದರಿಗೆ ನಾಲ್ಕು ಆಶ್ರಯ ಮನೆಗಳನ್ನು ನೀಡಲಾಗಿದ್ದು, ಆರ್ಥಿಕವಾಗಿ ಹಿಂದುಳಿದ 15 ಕಲಾವಿದರಿಗೆ ತಲಾ ₹30,000 ಪ್ರೋತ್ಸಾಹ ಧನ ವಿತರಿಸಲಾಗಿದೆ. 500 ಮಕ್ಕಳಿಗೆ ಒಂದು ದಿನದ ಪ್ರವಾಸವೂ ಆಯೋಜಿಸಲಾಗಿದೆ ಎಂದು ಪತ್ರಕರ್ತ ನಗರ ರಾಘವೇಂದ್ರ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡಿ. ದೇವರಾಜ್, ಉದ್ಯಮಿ ಸುರೇಶ್ ಎನ್., ಡಾ. ಚೈತನ್ಯ, ದುಮ್ಮ ವಿನಯ್, ಸಾಹಿತಿ ಸುದೀಂದ್ರ ಭಂಡರಕರ್, ಪತ್ರಕರ್ತ ಸಂಘದ ಅಧ್ಯಕ್ಷ ಎಂ.ಕೆ. ವೆಂಕಟೇಶ್ ಮೂರ್ತಿ, ಗೌತಮ್ ಆಚಾರ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುಜಾತ ಸುರೇಶ್ ಸ್ವಾಗತಿಸಿ, ಸುದೀಂದ್ರ ಪಂಡಿತ್ ಕಾರ್ಯಕ್ರಮ ನಿರೂಪಿಸಿದರು. 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯಕ್ಷಗಾನ ಪ್ರದರ್ಶನದಲ್ಲಿ ಭಾಗವಹಿಸಿದರು.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…