ರಿಪ್ಪನ್‌ಪೇಟೆ: ಗಾಂಜಾ ಸೇವಿಸಿ ಅಸಭ್ಯ ವರ್ತನೆ — ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಯುವಕರ ಬಂಧನ

Three youths were arrested by Ripponpete police in Shivamogga district for consuming ganja and behaving indecently in public places. Separate cases have been registered under the NDPS Act.

ರಿಪ್ಪನ್‌ಪೇಟೆ: ಗಾಂಜಾ ಸೇವಿಸಿ ಅಸಭ್ಯ ವರ್ತನೆ — ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಯುವಕರ ಬಂಧನ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರು ಯುವಕರನ್ನು ಪೊಲೀಸರು ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ.

ಬಂಧಿತರನ್ನು ಮಲ್ಲಾಪುರ ನಿವಾಸಿ ಬಿಪಿನ್ ಬಿನ್ ಬಾಬು (26), ಆನಂದಪುರದ ಯಡೆಹಳ್ಳಿ ನಿವಾಸಿ ಜೊಸೇಫ್ ಬಿನ್ ಸಾಜಿ ಜೊಸೇಫ್ (24) ಹಾಗೂ ಪಟ್ಟಣದ ಸಮೀಪದ ಮಳವಳ್ಳಿ ಗ್ರಾಮದ ಗಣೇಶ್ ಬಿನ್ ಕೃಷ್ಣಪ್ಪ (28) ಎಂದು ಗುರುತಿಸಲಾಗಿದೆ.

ಪ್ರಕರಣ–1:

ಪಟ್ಟಣದ ಕುಕ್ಕಳಲೆ ಬಸ್ ನಿಲ್ದಾಣದ ಬಳಿ ಗಸ್ತು ಸಂಚರಿಸುತ್ತಿದ್ದ ಪೊಲೀಸರಿಗೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಿಪಿನ್ ಕಂಡುಬಂದಿದ್ದಾನೆ. ವಿಚಾರಣೆ ವೇಳೆ ಮಾತು ತೊದಲುವಿಕೆ ಹಾಗೂ ಅಮಲು ಪದಾರ್ಥದ ವಾಸನೆ ಕಂಡುಬಂದ ಹಿನ್ನೆಲೆ ಕೂಲಂಕುಷವಾಗಿ ಪ್ರಶ್ನಿಸಿದಾಗ, ಬೀಡಿಗೆ ಗಾಂಜಾ ಸೇರಿಸಿ ಸೇವಿಸಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ. ಬಳಿಕ ವೈದ್ಯಕೀಯ ತಪಾಸಣೆಗೆ ಮೆಗಾನ್ ಆಸ್ಪತ್ರೆಗೆ ಕಳುಹಿಸಲಾಯಿತಾಗ, ಗಾಂಜಾ ಸೇವನೆ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಾದಕ ದ್ರವ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ–2:

ಗವಟೂರು ಬಸ್ ನಿಲ್ದಾಣದ ಬಳಿ ಅಸಭ್ಯ ವರ್ತನೆ ನಡೆಸುತ್ತಿದ್ದ ಜೊಸೇಫ್‌ನನ್ನು ಪೊಲೀಸರು ಹಿಡಿದು ವಿಚಾರಣೆ ನಡೆಸಿದಾಗ, ಗಾಂಜಾ ಸೇವಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದ್ದು, ಆತನ ವಿರುದ್ಧವೂ ಮಾದಕ ದ್ರವ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಕರಣ–3:

ಮಾವಿನಸರ ಬಸ್ ನಿಲ್ದಾಣದ ಬಳಿ ಅಸಭ್ಯವಾಗಿ ವರ್ತಿಸುತ್ತಿದ್ದ ಗಣೇಶ್‌ನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಬೀಡಿಗೆ ಗಾಂಜಾ ಸೇರಿಸಿ ಸೇವಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ವೈದ್ಯಕೀಯ ತಪಾಸಣೆಯಲ್ಲಿ ಗಾಂಜಾ ಸೇವನೆ ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮೂರು ಪ್ರಕರಣಗಳೂ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.

ಸಾರ್ವಜನಿಕರಿಗೆ ಪೊಲೀಸ್ ಮನವಿ:

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಅಥವಾ ಮಾರಾಟದ ಕುರಿತು ಮಾಹಿತಿ ಇದ್ದಲ್ಲಿ, ಸಾರ್ವಜನಿಕರು 9480803365 ಸಂಖ್ಯೆಗೆ ಕರೆ ಮಾಡಿ ತಿಳಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಮಾಹಿತಿದಾರರ ಗುರುತು ಸಂಪೂರ್ಣ ಗೌಪ್ಯವಾಗಿರುತ್ತದೆ ಎಂದು ತಿಳಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

17 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

17 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

21 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

23 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

23 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago