Categories: Blog

ಮಕ್ಕಳಲ್ಲಿ ಧರ್ಮಜಾಗೃತಿ ಮೂಡಿಸುವುದೇ ಭವಿಷ್ಯದ ಧರ್ಮರಕ್ಷಣೆ – ಕು. ಹಾರಿಕಾ ಮಂಜುನಾಥ್

A Hindu Sangama program was held in Ripponpete where Hindu thinker and orator Harika Manjunath called for unity beyond caste and creed and emphasized the importance of preserving Sanatana Dharma, culture, and traditions.

ರಿಪ್ಪನ್‌ಪೇಟೆ: ಜಾತಿ, ಮತ, ಪಂಥ, ಪಂಗಡಗಳ ಭೇದವನ್ನು ಮನೆಯೊಳಗೆ ಸೀಮಿತಗೊಳಿಸಿ, ಸಮಾಜದ ಹೊರಗೆ ಬಂದಾಗ ನಾವೆಲ್ಲರೂ ಹಿಂದೂ ಧರ್ಮೀಯರೆಂಬ ಒಗ್ಗಟ್ಟಿನ ಭಾವನೆ ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದು ಹಿಂದೂ ಧರ್ಮದ ಚಿಂತಕಿ ಹಾಗೂ ವಾಗ್ಮಿ, ಬೆಂಗಳೂರಿನ ಕು. ಹಾರಿಕಾ ಮಂಜುನಾಥ ಅಭಿಪ್ರಾಯಪಟ್ಟರು.

ಪಟ್ಟಣದ ಹಿಂದೂಪರ ಸಂಘಟನೆಗಳ ಆಶ್ರಯದಲ್ಲಿ ಸೋಮವಾರ ಆಯೋಜಿಸಲಾಗಿದ್ದ ‘ಹಿಂದೂ ಸಂಗಮ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಅವರು ಮಾತನಾಡಿ ಶತಶತಮಾನಗಳಿಂದ ಪರಕೀಯರ ನಿರಂತರ ದಾಳಿಗಳ ನಡುವೆಯೂ ಹಿಂದೂ ಧರ್ಮ ಜೀವಂತವಾಗಿರುವುದು ನಮ್ಮ ಪೂರ್ವಜರ ತ್ಯಾಗ ಮತ್ತು ಬಲಿದಾನಗಳ ಫಲವಾಗಿದೆ ಎಂದರು. ವೇದ, ಪುರಾಣ, ಉಪನಿಷತ್‌ಗಳು, ಆದಿ ರೇಣುಕಾಚಾರ್ಯರ ಸಿದ್ಧಾಂತ ಶಿಖಾಮಣಿ ಗ್ರಂಥ, ಬಸವಾದಿ ಶರಣರ ವಚನಗಳು, ಸಾಧು–ಸಂತರ, ಋಷಿಮುನಿಗಳ ಹಾಗೂ ದಾರ್ಶನಿಕರ ಚಿಂತನೆಗಳು ಸನಾತನ ಧರ್ಮದ ಮಹತ್ವವನ್ನು ಪೀಳಿಗೆಗಳಿಂದ ಪೀಳಿಗೆಗಳಿಗೆ ಸಾರಿವೆ ಎಂದು ಹೇಳಿದರು.

ಮಕ್ಕಳಲ್ಲಿ ಧರ್ಮದ ಕುರಿತು ಜಾಗೃತಿ ಮೂಡಿಸುವುದು ಅತ್ಯಗತ್ಯ. ಹಿಂದೂ ಧರ್ಮ ಗ್ರಂಥಗಳನ್ನು ಪರಿಚಯಿಸಿ, ಧರ್ಮದ ತತ್ವ–ಸಿದ್ಧಾಂತಗಳ ಸಾರವನ್ನು ತಿಳಿಸಬೇಕು. ವಾರಕ್ಕೊಮ್ಮೆಯಾದರೂ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ತೆರಳಿ ಸಂಪ್ರದಾಯ, ಆಚಾರ–ವಿಚಾರ, ಸಂಸ್ಕೃತಿ ಹಾಗೂ ಸಂಸ್ಕಾರಗಳನ್ನು ಎತ್ತಿ ಹಿಡಿಯಬೇಕು ಎಂದು ಸಲಹೆ ನೀಡಿದರು.

ವಿಭೂತಿ, ಕುಂಕುಮ, ಭಂಡಾರ, ಗಂಧಗಳಂತಹ ಸನಾತನ ಧರ್ಮದ ಸಂಕೇತಗಳನ್ನು ಧರಿಸುವ ಜೊತೆಗೆ ಅದರ ಮಹತ್ವವನ್ನು ಮಕ್ಕಳಿಗೆ ತಿಳಿಸುವ ಕೆಲಸವೂ ಆಗಬೇಕು ಎಂದರು. ಮನೆಯಲ್ಲಿ ತಾಯಂದಿರು ಹಾಗೂ ಹೆಣ್ಣು ಮಕ್ಕಳು ಹಣೆಗೆ ಕುಂಕುಮ ಧರಿಸುವಂತೆ ಪ್ರೇರೇಪಿಸಿ ಸಂಸ್ಕಾರ ಕಲಿಸಬೇಕೆಂದು ಹೇಳಿದರು.

ಆರ್‌ಎಸ್‌ಎಸ್ ದೇಶದ ಅತ್ಯಂತ ದೊಡ್ಡ ಹಿಂದೂ ಸಂಘಟನೆಯಾಗಿದ್ದು, ಶತಮಾನಗಳಿಂದ ಧರ್ಮ ಉಳಿವಿಗಾಗಿ ಶ್ರಮಿಸುತ್ತ ಬಂದಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಶತಮಾನಗಳ ಹೋರಾಟದ ಫಲವಾಗಿದೆ. ಸನಾತನ ಹಿಂದೂ ಧರ್ಮದ ಸಂಸ್ಕೃತಿ ರಕ್ಷಣೆ ಪ್ರತಿಯೊಬ್ಬರ ಕನಸಾಗಬೇಕು. ದೇಶದ ಹೆಮ್ಮೆಯ ಸೈನಿಕರು ‘ಆಪರೇಷನ್ ಸಿಂಧೂರ’ದ ಮೂಲಕ ಪರಂಪರೆಯ ಸಾರವನ್ನು ಸಾಕಾರಗೊಳಿಸಿದ್ದಾರೆ. ಧರ್ಮ ರಕ್ಷಣೆಗೆ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು. ಹಿರಿಯರು ಹಿಂದೂ ಕಾರ್ಯಕರ್ತರಿಗೆ ನೈತಿಕ ಧೈರ್ಯ ನೀಡಬೇಕು. ನಾವು ಧರ್ಮವನ್ನು ರಕ್ಷಿಸಿದರೆ ಧರ್ಮವೇ ಸದಾ ನಮ್ಮನ್ನು ರಕ್ಷಿಸುತ್ತದೆ ಎಂದು ಅವರು ಹೇಳಿದರು.

ಪ್ರಾಸ್ತಾವಿಕವಾಗಿ ಹೊಸನಗರ ತಾಲೂಕ್ ಆರ್ ಎಸ್ ಎಸ್ ತಾಲೂಕ್ ಸಹ ಕಾರ್ಯವಾಹ ಕಾರ್ತಿಕ್ ಎನ್ ಮಾತನಾಡಿದರು.

ಈ ಸಂಧರ್ಭದಲ್ಲಿ ಹಿಂದೂ ಸಂಗಮದ ಹೊಸನಗರ ತಾಲೂಕ್ ಅಧ್ಯಕ್ಷ ವಿನಯ್ ಶೆಟ್ಟಿ , ಪಟ್ಟಣದ ಹಿರಿಯ ಕೃಷಿಕ ಅನಂತಕುಮಾರ್ ಜವುಳಿ ಇದ್ದರು.

ಸುಮಾ ಮಾತಾಜೀ ಸ್ವಾಗತಿಸಿದರು , ರಂಜನ್ ಮತ್ತು ಭರತ್ ನಿರೂಪಿಸಿದರು, ಮಂಜುನಾಥ್ ವಂದಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

1 hour ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

2 hours ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

2 hours ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

9 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

13 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

13 hours ago