A 56-year-old farmer died by suicide in Ballibailu village near Anandapura, Sagara taluk, reportedly due to mounting loan pressure from bank and microfinance borrowings. Police have registered a case.
ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಗ್ರಾಮದಲ್ಲಿ ಗೋಪಾಲ (56) ಎಂಬವರು ಮಾವಿನ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ.
ರೈತ ಗೋಪಾಲ ರವರು ಸುಮಾರು ಎರಡು ವರ್ಷಗಳ ಹಿಂದೆ State Bank of india ದಲ್ಲು ರೂ.4 ಲಕ್ಷ ಕೃಷಿ ಸಾಲ ಪಡೆದು ಅಡಿಕೆ ಸಸಿಗಳನ್ನು ನೆಟ್ಟಿದ್ದರು. ಇದರ ಜೊತೆಗೆ ಮೈಕ್ರೋ ಫೈನಾನ್ಸ್ ಸಂಸ್ಥೆಯಿಂದ ರೂ.50,000 ಹಾಗೂ ಇನ್ನಿತರ ಸಣ್ಣಪುಟ್ಟ ಕೈ ಸಾಲಗಳನ್ನು ಕೂಡ ಮಾಡಿಕೊಂಡಿದ್ದರು. ಸಾಲ ತೀರಿಸುವ ಒತ್ತಡದಿಂದಾಗಿ ಅವರು ಮನಸ್ಸಿಗೆ ತೀವ್ರ ಬೇಸರಗೊಂಡಿದ್ದರು ಎಂದು ತಿಳಿದುಬಂದಿದೆ.
ಗುರುವಾರ ಸಂಜೆ ಗೋಪಾಲರು ಕಾಣೆಯಾಗಿದ್ದರಿಂದ ಮನೆಯವರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದಾಗ, ಮನೆಯ ಹಿತ್ತಲಿನ ಮಾವಿನ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…