A 56-year-old farmer died by suicide in Ballibailu village near Anandapura, Sagara taluk, reportedly due to mounting loan pressure from bank and microfinance borrowings. Police have registered a case.
ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಗ್ರಾಮದಲ್ಲಿ ಗೋಪಾಲ (56) ಎಂಬವರು ಮಾವಿನ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ.
ರೈತ ಗೋಪಾಲ ರವರು ಸುಮಾರು ಎರಡು ವರ್ಷಗಳ ಹಿಂದೆ State Bank of india ದಲ್ಲು ರೂ.4 ಲಕ್ಷ ಕೃಷಿ ಸಾಲ ಪಡೆದು ಅಡಿಕೆ ಸಸಿಗಳನ್ನು ನೆಟ್ಟಿದ್ದರು. ಇದರ ಜೊತೆಗೆ ಮೈಕ್ರೋ ಫೈನಾನ್ಸ್ ಸಂಸ್ಥೆಯಿಂದ ರೂ.50,000 ಹಾಗೂ ಇನ್ನಿತರ ಸಣ್ಣಪುಟ್ಟ ಕೈ ಸಾಲಗಳನ್ನು ಕೂಡ ಮಾಡಿಕೊಂಡಿದ್ದರು. ಸಾಲ ತೀರಿಸುವ ಒತ್ತಡದಿಂದಾಗಿ ಅವರು ಮನಸ್ಸಿಗೆ ತೀವ್ರ ಬೇಸರಗೊಂಡಿದ್ದರು ಎಂದು ತಿಳಿದುಬಂದಿದೆ.
ಗುರುವಾರ ಸಂಜೆ ಗೋಪಾಲರು ಕಾಣೆಯಾಗಿದ್ದರಿಂದ ಮನೆಯವರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದಾಗ, ಮನೆಯ ಹಿತ್ತಲಿನ ಮಾವಿನ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…