ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಎನ್ನುವ ಸುಳ್ಳು ಪ್ರಚಾರ: ವಿದ್ಯಾರ್ಥಿಗಳ ಆತಂಕಕ್ಕೆ ತೆರೆ ಹಾಕಿದ ಮಂಡಳಿ

Social media posts claiming to sell Second PUC question papers for money have created panic among students and parents in Karnataka. The examination board has clarified that there is no question paper leak and warned against online fraud.

ಬೆಂಗಳೂರು, ಫೆ.26: ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರ ವಿರುದ್ಧ ನಿರ್ದಾಕ್ಷ್ಯಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದರೂ, ಮತ್ತೆ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಬೇಕೇ? ಎಂದು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ಗಳು ಹರಿದಾಡುತ್ತಿರುವುದು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

100 ರೂಪಾಯಿ ಕೊಟ್ಟರೆ ಸಾಕು ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ನೀಡುವುದಾಗಿ ಹೇಳುವ ವಿಡಿಯೋ ಸಹಿತ ಪೋಸ್ಟ್‌ಗಳನ್ನು ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ‘ಡೆಲ್ಟಾ ಕನ್ನಡಿಗ’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ, ಯಾವುದಾದರೂ ಪ್ರಶ್ನೆ ಪತ್ರಿಕೆ ಬೇಕಿದ್ದರೆ ಮೆಸೇಜ್ ಮಾಡಿ, ಮೊತ್ತವನ್ನು ನಂತರ ತಿಳಿಸುತ್ತೇನೆ ಎಂದು ಕಿಡಿಗೇಡಿಯೊಬ್ಬ ಬರೆದುಕೊಂಡಿರುವುದು ಗಮನ ಸೆಳೆದಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಅವರು, “ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಶಿಕ್ಷಣ ಇಲಾಖೆಗೆ ಯಾವುದೇ ಭಯವಿಲ್ಲ. ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವ ಸೋರಿಕೆ ಸುದ್ದಿ ಸಂಪೂರ್ಣ ಸುಳ್ಳು” ಎಂದು ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಪರೀಕ್ಷೆಯ ಸಮಯದಲ್ಲಿ ಹಣ ಮಾಡುವ ಉದ್ದೇಶದಿಂದ ಹಳೆಯ ಅಥವಾ ನಕಲಿ ಪ್ರಶ್ನೆ ಪತ್ರಿಕೆಗಳನ್ನು ನೀಡಿ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಸಾಧ್ಯತೆ ಹೆಚ್ಚಿದೆ. ಇಂತಹ ಜಾಲಗಳಿಗೆ ಸಿಲುಕಿಕೊಂಡು ಹಣ ಕಳೆದುಕೊಳ್ಳಬೇಡಿ, ನಿಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ವಿದ್ಯಾರ್ಥಿಗಳಿಗೆ ಗೊಂದಲ ಮೂಡಿಸುತ್ತಿರುವ ಸಾಮಾಜಿಕ ಜಾಲತಾಣ ಖಾತೆಗಳ ಪರಿಶೀಲನೆಗೆ ಪರೀಕ್ಷಾ ಮಂಡಳಿ ಮುಂದಾಗಿದ್ದು, ಸಂಬಂಧಿತ ಕಿಡಿಗೇಡಿಗಳ ವಿರುದ್ಧ ಸೈಬರ್ ಪೊಲೀಸರಿಗೆ ದೂರು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಫೆ. 28ರಿಂದ ಮಾ. 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ–1 ನಡೆಯಲಿದೆ. ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರತಿ ಕೇಂದ್ರದಲ್ಲೂ ವೆಬ್‌ಕಾಸ್ಟಿಂಗ್ ಕಡ್ಡಾಯ ಮಾಡಲಾಗಿದೆ.

ಇದಕ್ಕೂ ಮುನ್ನ, ಶಿವಮೊಗ್ಗದಲ್ಲಿ ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಪ್ರಕರಣ ಅಧಿಕಾರಿಗಳಿಗೆ ದೊಡ್ಡ ಆಘಾತ ನೀಡಿತ್ತು. ಪರೀಕ್ಷೆ ಆರಂಭಕ್ಕೂ ಮೊದಲು ವಾಟ್ಸಾಪ್ ಮೂಲಕ ಪ್ರಶ್ನೆ ಪತ್ರಿಕೆ ಹರಿದಾಡಿದ್ದದ್ದು ಪತ್ತೆಯಾಗಿತ್ತು. ಶಿವಮೊಗ್ಗ ಜಿಲ್ಲೆಯ ಕೋಡ್ ಹೊಂದಿದ್ದ ಪ್ರಶ್ನೆ ಪತ್ರಿಕೆ ತುಮಕೂರು ಜಿಲ್ಲೆಯಲ್ಲೂ ಚಲಾವಣೆಯಲ್ಲಿದ್ದದ್ದು ಕಂಡುಬಂದಿದ್ದು, ಹಿರಿಯ ಅಧಿಕಾರಿಗಳ ಸೂಚನೆಯಂತೆ ಕೋಟೆ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…

11 hours ago

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…

18 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

1 day ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

1 day ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

1 day ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

1 day ago