POSTMANNEWS

ನೈಜ ಸುದ್ದಿ ನೇರ ಬಿತ್ತರ..

ಅಂಗನವಾಡಿ ಸಹಾಯಕಿಯ ಭೀಕರ ಕೊಲೆ | ರಾತ್ರಿ ನಡೆದ ಬರ್ಬರ ಕೃತ್ಯ, ದುಷ್ಕರ್ಮಿಗಳು ಪರಾರಿ

ಅಂಗನವಾಡಿ ಸಹಾಯಕಿಯ ಭೀಕರ ಕೊಲೆ | ರಾತ್ರಿ ನಡೆದ ಬರ್ಬರ ಕೃತ್ಯ, ದುಷ್ಕರ್ಮಿಗಳು ಪರಾರಿ

A 52-year-old Anganwadi assistant was brutally murdered near Belagihalli in Shiralkoppa of Shikaripura taluk, Shivamogga district. Police have registered a case and launched an investigation to trace the accused.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಬೆಳಗಿಯಲ್ಲಿ ಅಂಗನವಾಡಿ ಸಹಾಯಕಿಯಾಗಿದ್ದ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. 52 ವರ್ಷದ ಪ್ರೇಮಾ ಎಂಬುವರು ಈ ಕೃತ್ಯಕ್ಕೆ ಬಲಿಯಾಗಿದ್ದು, ದುಷ್ಕರ್ಮಿಗಳು ಕೊಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳೀಯರ ಮಾಹಿತಿ ಪ್ರಕಾರ, ನಿನ್ನೆ ರಾತ್ರಿ ಅನಾಮಧೇಯರು ಪ್ರೇಮಾಳ ಮನೆಗೆ ನುಗ್ಗಿ ಮಾರಕ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಪ್ರೇಮಾ ಸ್ಥಳದಲ್ಲೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಬೆಳಿಗ್ಗೆ ಮನೆಗೆ ಬಂದ ಕುಟುಂಬಸ್ಥರು ಹಾಗೂ ನೆರೆಹೊರೆಯವರು ರಕ್ತದ ಮಡುವಿನಲ್ಲಿ ಬಿದ್ದಿದ್ದ ದೇಹವನ್ನು ಕಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ಹರಡುತ್ತಿದ್ದಂತೆ ಗ್ರಾಮದಲ್ಲಿ ಆತಂಕ ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಯಿತು.

ಕೊಲೆಯಾದ ಪ್ರೇಮಾ ತಮ್ಮ ನಾಲ್ವರು ಮಕ್ಕಳೊಂದಿಗೆ ವಾಸವಿದ್ದರು. ಮೂವರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗನೊಂದಿಗೆ ಜೀವನ ಸಾಗಿಸುತ್ತಿದ್ದ ಅವರು ಕುಟುಂಬದ ಆಧಾರಸ್ತಂಭವಾಗಿದ್ದರು. ಅಂಗನವಾಡಿ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಪ್ರೇಮಾ ಗ್ರಾಮದಲ್ಲಿ ಎಲ್ಲರಿಗೂ ಪರಿಚಿತ ವ್ಯಕ್ತಿಯಾಗಿದ್ದು, ಅವರ ಹತ್ಯೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಘಟನೆ ಸ್ಥಳಕ್ಕೆ ಶಿರಾಳಕೊಪ್ಪ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳ ಹಾಗೂ ಫಾರೆನ್ಸಿಕ್ ತಜ್ಞರನ್ನು ಕರೆಸಿ ಸಾಕ್ಷ್ಯ ಸಂಗ್ರಹಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ವೈಯಕ್ತಿಕ ವೈಷಮ್ಯ ಅಥವಾ ಹಳೆಯ ದ್ವೇಷದ ಕೋನದಿಂದ ಕೊಲೆ ನಡೆದಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.

About The Author

Exit mobile version