ಮಗಳ ಮೆಸೇಜ್‌ನಿಂದ ಬಯಲಾದ ರಹಸ್ಯ | ಶಿವಮೊಗ್ಗದ ಜ್ಯೋತಿಷಿ ಜೊತೆಗಿನ ಅನೈತಿಕ ಸಂಬಂಧ – ರಾತ್ರೋರಾತ್ರಿ ದಾಳಿ , ಓರ್ವ ಸಾವು

A shocking stabbing and murder case in Siddapur of Uttara Kannada has exposed an alleged illicit relationship between a Shivamogga-based astrologer and a married woman. Police say the incident followed revelations made by the woman’s daughter to her father, leading to a violent late-night attack. One person was killed while others were injured. Several accused, including the astrologer, have been arrested and are under police investigation.

ಮಗಳ ಮೆಸೇಜ್‌ನಿಂದ ಬಯಲಾದ ರಹಸ್ಯ | ಶಿವಮೊಗ್ಗದ ಜ್ಯೋತಿಷಿ ಜೊತೆಗಿನ ಅನೈತಿಕ ಸಂಬಂಧ – ರಾತ್ರೋರಾತ್ರಿ ದಾಳಿ , ಓರ್ವ ಸಾವು

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಚಾಕು ಇರಿತ ಹಾಗೂ ಕೊಲೆ ಪ್ರಕರಣದ ಹಿನ್ನೆಲೆ ಇದೀಗ ಬಹಿರಂಗವಾಗಿದ್ದು, ಶಿವಮೊಗ್ಗದ ಜ್ಯೋತಿಷಿ ಕಮಲಾಕರ ಭಟ್ ಹಾಗೂ ವಿವಾಹಿತ ಮಹಿಳೆ ಸುಚಿತ್ರಾ ನಡುವಿನ ಅನೈತಿಕ ಸಂಬಂಧದ ಆರೋಪ ಈ ಹಲ್ಲೆಗೆ ಕಾರಣ ಎನ್ನಲಾಗಿದೆ.

ಪೊಲೀಸ್ ಮಾಹಿತಿ ಪ್ರಕಾರ, ಸಿದ್ದಾಪುರದ ಮಹೇಶ್ ನಾಯ್ಕ್ ಅವರ ಪತ್ನಿ ಸುಚಿತ್ರಾ ಸುಮಾರು ಆರು ತಿಂಗಳ ಹಿಂದೆ ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆ ಬಿಟ್ಟು ತೆರಳಿದ್ದು, ನಂತರ ಶಿವಮೊಗ್ಗದಲ್ಲಿ ಕಮಲಾಕರ ಭಟ್ ಅವರೊಂದಿಗೆ ವಾಸಿಸುತ್ತಿದ್ದಳು ಎನ್ನಲಾಗಿದೆ. ಈ ವಿಷಯವನ್ನು ಸುಚಿತ್ರಾಳ ಮಗಳು ರಹಸ್ಯವಾಗಿ ತಂದೆಗೆ ಮೊಬೈಲ್ ಸಂದೇಶದ ಮೂಲಕ ತಿಳಿಸಿದ್ದಾಳೆ ಎಂದು ತಿಳಿದು ಬಂದಿದೆ.

ಮಗಳು ಕಳುಹಿಸಿದ್ದ ಸಂದೇಶದಲ್ಲಿ ತಾಯಿಯಿಂದ ಹಿಂಸೆ ನಡೆಯುತ್ತಿದೆ ಹಾಗೂ ಅಲ್ಲಿನ ಪರಿಸ್ಥಿತಿ ಅಸುರಕ್ಷಿತವಾಗಿದೆ ಎಂದು ಉಲ್ಲೇಖಿಸಿದ್ದಾಳೆ ಎನ್ನಲಾಗಿದೆ. ಈ ಬೆಳವಣಿಗೆಯ ನಂತರ ಮಗಳು ತಂದೆಯ ಮನೆಗೆ ಮರಳಿದ್ದಾಳೆ.

ಈ ವಿಚಾರದಿಂದ ಆಕ್ರೋಶಗೊಂಡ ಸುಚಿತ್ರಾ, ಆಕೆಯ ತಂದೆ ಲೋಕನಾಥ್ ಹಾಗೂ ಇನ್ನಿತರ ಆರೋಪಿಗಳು ಸೇರಿ ರಾತ್ರಿ ವೇಳೆ ಮಹೇಶ್ ನಾಯ್ಕ್ ನಿವಾಸಕ್ಕೆ ನುಗ್ಗಿ ಚಾಕು ಹಿಡಿದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಯಲ್ಲಿ ಮಹೇಶ್ ನಾಯ್ಕ್ ಗುರಿಯಾಗಿದ್ದು, ಅವರನ್ನು ರಕ್ಷಿಸಲು ಮುಂದಾದ ಅವರ ಸಹೋದರ ವಸಂತ್ ನಾಯ್ಕ್ ಮೇಲೆ ಬರ್ಬರವಾಗಿ ಇರಿತ ನಡೆದಿದ್ದು, ವಸಂತ್ ನಾಯ್ಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ನೆರೆಯ ಕುಮಾರ್ ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣದ ತನಿಖೆ ಕೈಗೊಂಡಿರುವ ಪೊಲೀಸರು, ಮಹಿಳೆ ಸುಚಿತ್ರಾ, ಆಕೆಯ ತಂದೆ ಲೋಕನಾಥ್, ಜ್ಯೋತಿಷಿ ಕಮಲಾಕರ ಭಟ್ ಸೇರಿದಂತೆ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ, ಕೊಲೆ ಯತ್ನ ಸೇರಿದಂತೆ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

19 hours ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

19 hours ago

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…

20 hours ago

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

2 days ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

2 days ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

2 days ago