Blind T20 World Cup winner Kavya V from Ripponpete was felicitated by the Karnataka Vishwakarma Communities Development Corporation, with assurances of government support, facilities, and welfare measures.
ಆಲ್ರೌಂಡರ್ ಕಾವ್ಯಾ ಸಾಧನೆಗೆ ವಿಶ್ವಕರ್ಮ ನಿಗಮದ ಗೌರವ | ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗುವುದು – ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿ ಭರವಸೆ
ರಿಪ್ಪನ್ಪೇಟೆ: ಭಾರತ ಮಹಿಳಾ ತಂಡವು ಟಿ20 ಅಂಧರ ವಿಶ್ವಕಪ್ ಜಯಿಸುವ ಮೂಲಕ ದೇಶಕ್ಕೆ ಕೀರ್ತಿ ತಂದ ಹಿನ್ನೆಲೆಯಲ್ಲಿ, ವಿಶ್ವಕಪ್ ವಿಜೇತೆ ರಿಪ್ಪನ್ಪೇಟೆಯ ಕಾವ್ಯಾ ವಿ ಅವರಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿ ಭರವಸೆ ನೀಡಿದರು.
ಭಾರತಕ್ಕೆ ಕೀರ್ತಿ ತಂದ ಮಹಿಳಾ ತಂಡದ ಪ್ರಮುಖ ಸದಸ್ಯೆಯಾಗಿರುವ ಕಾವ್ಯಾ ವಿ ಅವರನ್ನು ನಿಗಮದ ವತಿಯಿಂದ ಬರುವೆ ಗ್ರಾಮದ ಅವರ ಸ್ವಗ್ರಹದಲ್ಲಿ ವಿಶೇಷವಾಗಿ ಸನ್ಮಾನಿಸಿ ಮಾತನಾಡಿದ ಅವರು, ಕರ್ನಾಟಕದಿಂದ ವಿಶ್ವಕಪ್ ಚಾಂಪಿಯನ್ ತಂಡದಲ್ಲಿ ಪ್ರಮುಖ ಆಟಗಾರ್ತಿಯಾಗಿದ್ದ ಕಾವ್ಯಾ ಆಲ್–ರೌಂಡರ್ ಆಗಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಪ್ರಶಂಸಿಸಿದರು. ಸರ್ಕಾರದಿಂದ ಸಿಗಬೇಕಾದ ಎಲ್ಲಾ ರೀತಿಯ ಸವಲತ್ತುಗಳನ್ನು ಅವರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಬಿಡಿಎ ಸೈಟ್ ಒದಗಿಸುವುದು, ಸಾರ್ವಜನಿಕ ಕಂಪನಿಗೆ ಕಾವ್ಯಾ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡುವ ಬಗ್ಗೆ ಹಾಗೂ ಸಿಎಸ್ಆರ್ ನಿಧಿಯ ಮೂಲಕ ಬಡತನದಲ್ಲಿರುವ ಕುಟುಂಬಕ್ಕೆ ಮನೆ ನಿರ್ಮಿಸುವ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಸುಜ್ಞಾನ ಮೂರ್ತಿ ಹೇಳಿದರು.
ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಿತಿಯ ರಾಜ್ಯಾಧ್ಯಕ್ಷ ಕನ್ನಡ ಸೋಮು, ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷರು, ತಾಲ್ಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷ ದೇವದಾಸ್ ಆಚಾರ್, ಶಿವಮೊಗ್ಗ ಜಿಲ್ಲಾ ವಿಶ್ವಕರ್ಮ ಮಹಿಳಾ ಮೋರ್ಚಾದ ಅಧ್ಯಕ್ಷರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…
ಶಿವಮೊಗ್ಗ ಲೋಕಾಯುಕ್ತ ಎಸ್ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…